Webdunia - Bharat's app for daily news and videos

Install App

ನಟ ದರ್ಶನ್ ಈಗ ಈ ಇಲಾಖೆಯ ರಾಯಭಾರಿಯಂತೆ

Webdunia
ಶುಕ್ರವಾರ, 1 ಜೂನ್ 2018 (06:24 IST)
ಬೆಂಗಳೂರು : ಪ್ರಾಣಿಗಳನ್ನು ದತ್ತು ಪಡೆದು ಅವುಗಳ ಪಾಲನೆ ಮಾಡುತ್ತಿರುವ ಸ್ಯಾಂಡಲ್ ವುಡ್ ನ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇದೀಗ ಕರ್ನಾಟಕ ಅರಣ್ಯ ಇಲಾಖೆಯ ರಾಯಾಭಾರಿಯಾಗಿ ಆಯ್ಕೆಯಾಗಿದ್ದಾರೆ.


ಹೌದು ನಟ ದರ್ಶನ್ ಅವರು ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಹುಲಿ, ಆನೆ ಸೇರಿದಂತೆ ನಾನಾ ಪ್ರಾಣಿಗಳನ್ನು ದತ್ತು ಪಡೆದು ಆ ಪ್ರಾಣಿಗಳ ಪಾಲನೆಗೆ ಸಹಕರಿಸಿದ್ದಾರೆ. ಹಾಗೇ ನಗರದ ಹೊರವಲಯದಲ್ಲಿರುವ ಕೆಂಪಯ್ಯನ ಹುಂಡಿಯಲ್ಲಿರುವ ತಮ್ಮ ಫಾರಂ ಹೌಸ್ ನಲ್ಲಿ ಕುದುರೆ ಸೇರಿದಂತೆ ಹಲವಾರು ಪ್ರಾಣಿ ಪಕ್ಷಗಳನ್ನು ಸಾಕುತ್ತಿದ್ದಾರೆ. ಚಿತ್ರೀಕರಣದ ಬಿಡುವಿನ ವೇಳೆಯಲ್ಲಿ ಫಾರಂ ಹೌಸ್ ಗೆ ಆಗಮಿಸುವ ದರ್ಶನ್ ಕುದುರೆ ಸವಾರಿ ಮಾಡಿ ಪ್ರಾಣಿ ಪಕ್ಷಿಗಳ ಜೊತೆ ಕಾಲ ಕಳೆಯುತ್ತಾರೆ.
ಆದಕಾರಣ ಅರಣ್ಯ ಇಲಾಖೆ ಅಧಿಕಾರಿಗಳು ದರ್ಶನ್ ಅವರನ್ನು  ರಾಯಭಾರಿಯಾಗಿ ನೇಮಕಗೊಳಿಸಿ ಅದಕ್ಕೆ ಸಂಬಂಧಪಟ್ಟ ಪತ್ರವನ್ನು ನೀಡಿದ್ದಾರೆ. ಇನ್ನು ಮುಂದೆ ನಟ ದರ್ಶನ್ ಅವರು ವಿಶ್ವಭೂಮಿ ದಿನಾಚರಣೆ, ಪರಿಸರ ದಿನಾಚರಣೆ, ವನ ಮಹೋತ್ಸವ ಹಾಗೂ ಇನ್ನಿತರ ಅರಣ್ಯ ಇಲಾಖೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅರಣ್ಯ,ವನ್ಯಜೀವಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments