Webdunia - Bharat's app for daily news and videos

Install App

Darshan: ನನಗೆ ಬೆನ್ನು ನೋವಿದೆ ಕೋರ್ಟ್ ಗೆ ಬರಕ್ಕಾಗಲ್ಲ ಎಂದ ದರ್ಶನ್ ಗೆ ಕೋರ್ಟ್ ಕ್ಲಾಸ್

Krishnaveni K
ಮಂಗಳವಾರ, 8 ಏಪ್ರಿಲ್ 2025 (12:32 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಇಂದು ಕೋರ್ಟ್ ಗೆ ಹಾಜರಾಗಬೇಕಿತ್ತು. ಆದರೆ ಬೆನ್ನು ನೋವಿನ ನೆಪವೊಡ್ಡಿ ಬರಲಾಗುವುದಿಲ್ಲ ಎಂದ ದರ್ಶನ್ ಗೆ ಕೋರ್ಟ್ ಕ್ಲಾಸ್ ತೆಗೆದುಕೊಂಡಿದೆ.

ಜಾಮೀನಿನ ಮೇಲೆ ಹೊರಗಿರುವ ಎಲ್ಲಾ 17 ಆರೋಪಿಗಳು ಇಂದು ಕೋರ್ಟ್ ಗೆ ಹಾಜರಾಗಬೇಕಿತ್ತು. ಆದರೆ ನಟ ದರ್ಶನ್ ನನಗೆ ಬೆನ್ನು ನೋವಿದೆ ಕೋರ್ಟ್ ಗೆ ಬರಲು ಆಗುವುದಿಲ್ಲ ಎಂದು ವಕೀಲರ ಮೂಲಕ ನ್ಯಾಯಾಲಯಕ್ಕೆ ಕೇಳಿದ್ದರು.

ಆದರೆ ಇಂದು ನಟ ದರ್ಶನ್ ಗೈರಾಗಿರುವುದಕ್ಕೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲಾ ಆರೋಪಿಗಳೂ ನಿಗದಿತ ದಿನಕ್ಕೆ ಕೋರ್ಟ್ ಗೆ ಕಡ್ಡಾಯವಾಗಿ ಹಾಜರಾಗಲೇಬೇಕು ಎಂದು ನ್ಯಾಯಾಧೀಶರು ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮೊನ್ನೆಯಷ್ಟೇ ನಟ ದರ್ಶನ್ ರಾಜಸ್ಥಾನ್ ನಿಂದ ಡೆವಿಲ್ ಶೂಟಿಂಗ್ ಮುಗಿಸಿ ಬಂದಿದ್ದರು. ಆದರೆ ಈಗ ವಿಚಾರಣೆಗೆ ಹಾಜರಾಗಲಾಗದಷ್ಟು ಬೆನ್ನು ನೋವಿದೆಯೇ ಎಂಬ ಅಚ್ಚರಿ ಮೂಡಿದೆ. ಸತತ ಶೂಟಿಂಗ್ ಮಾಡಿದ್ದರಿಂದ ಬೆನ್ನು ನೋವು ಉಲ್ಬಣವಾಗಿದೆ ಎಂದು ವಕೀಲರು ವಿವರಣೆ ನೀಡಿದ್ದಾರೆ ಎನ್ನಲಾಗಿದೆ.

ಉಳಿದಂತೆ ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳು ಇಂದು ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾರೆ. ಈ ವೇಳೆ ಆರೋಪಿಗಳು ತಮ್ಮ ಮೊಬೈಲ್ ಮರಳಿಸಲು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments