Webdunia - Bharat's app for daily news and videos

Install App

ಕೊರಗಜ್ಜನ ಸನ್ನಿಧಾನಕ್ಕೆ ಭೇಟಿ ಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್

Krishnaveni K
ಭಾನುವಾರ, 10 ಮಾರ್ಚ್ 2024 (11:41 IST)
Photo Courtesy: Twitter
ಬೆಂಗಳೂರು: ಕಾಟೇರ ಸಕ್ಸಸ್ ಬಳಿಕ ಸಿನಿಮಾಗಳಿಂದ ಕೊಂಚ ಬ್ರೇಕ್ ತೆಗೆದುಕೊಂಡಿರುವ ನಟ ದರ್ಶನ್ ಇದೀಗ ಕುತ್ತಾರು ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ.

ಮಂಗಳೂರಿನ ಕುತ್ತಾರಿನಲ್ಲಿರುವ ಕೊರಗಜ್ಜನ ಸನ್ನಿಧಾನಕ್ಕೆ ತಮ್ಮ ಸಂಗಡಿಗರೊಂದಿಗೆ ದರ್ಶನ್ ಭೇಟಿ ಕೊಟ್ಟಿದ್ದಾರೆ. ಕೊರಗಜ್ಜನ ಆದಿಸ್ಥಳ ಕುತ್ತಾರು ಕೊರಗಜ್ಜ ಸನ್ನಿಧಾನಕ್ಕೆ ಇದೇ ಮೊದಲ ಬಾರಿಗೆ ದರ್ಶನ್ ಭೇಟಿ ಕೊಟ್ಟಿದ್ದಾರೆ. ಮಂಗಳೂರಿಗೆ ಹಲವು ಸಲ ಬಂದಿದ್ದೇನೆ. ಆದರೆ ಕೊರಗಜ್ಜನ ಸನ್ನಿಧಾನಕ್ಕೆ ಇದೇ ಮೊದಲ ಬಾರಿಗೆ ಭೇಟಿ ಕೊಡುತ್ತಿದ್ದೇನೆ. ಹಾಗೆ ನೋಡಿಕೊಂಡು ಹೋಗೋಣ ಅಂತ ಬಂದೆ ಎಂದಿದ್ದಾರೆ.

ಇದರ ಹೊರತಾಗಿ ಇಲ್ಲಿಗೆ ಬರುವುದಿಕ್ಕೆ ವಿಶೇಷ ಕಾರಣವೇನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ದರ್ಶನ್ ವಿರುದ್ಧ ಒಂದಾದ ಮೇಲೊಂದರಂತೆ ಆರೋಪ, ವಿವಾದಗಳು ಕೇಳಿಬರುತ್ತಲೇ ಇವೆ. ಇದರ ನಡುವೆ ಅವರು ದೈವದ ಮೊರೆ ಹೋಗಿದ್ದಾರೆ. ಈ ವೇಳೆ ಕ್ಷೇತ್ರದ ವತಿಯಿಂದ ಅವರಿಗೆ ಸನ್ಮಾನ ಮಾಡಲಾಯಿತು.

ಕೊರಗಜ್ಜ ಸನ್ನಿಧಾನಕ್ಕೆ ಇತ್ತೀಚೆಗೆ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಲೇ ಇರುತ್ತಾರೆ. ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯಿಂದ ಹಿಡಿದು, ಮಾಲಾಶ್ರೀ, ರಕ್ಷಿತಾ ಪ್ರೇಮ್, ಪ್ರೇಮಾ ಸೇರಿದಂತೆ ಹಲವು ಸೆಲೆಬ್ರಿಟಿಗಳು ಇತ್ತೀಚೆಗಿನ ದಿನದಲ್ಲಿ ಇಲ್ಲಿಗೆ ಭೇಟಿ ನೀಡಿ ದೈವದ ಆಶೀರ್ವಾದ ಪಡೆದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments