Webdunia - Bharat's app for daily news and videos

Install App

ಏನೋ ಹೇಳಲು ಹೋಗಿ ಇನ್ನೇನೋ ಮಾಡಿಕೊಂಡ ನಟ ಜೆಕೆ!

Webdunia
ಮಂಗಳವಾರ, 3 ಅಕ್ಟೋಬರ್ 2017 (10:48 IST)
ಬೆಂಗಳೂರು: ಅಶ್ವಿನಿ ನಕ್ಷತ್ರ ಧಾರವಾಹಿ ಮೂಲಕ ಜನರಿಗೆ ಸೂಪರ್ ಸ್ಟಾರ್ ಜೆಕೆ ಎಂದೇ ಪರಿಚಿತರಾದ ನಟ ಜಯರಾಂ ಕಾರ್ತಿಕ್ ಸುಖಾ ಸುಮ್ಮನೇ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.


 
ಇದೆಲ್ಲಾ ಶುರುವಾಗಿದ್ದು ಜೆಕೆ ಹಾಕಿದ ಒಂದು ಫೇಸ್ ಬುಕ್ ಪೋಸ್ಟ್ ನಿಂದ. ಹಿಂದಿಯ ಪೌರಾಣಿಕ ಧಾರವಾಹಿಯೊಂದರಲ್ಲಿ ರಾವಣನ ಪಾತ್ರ ಮಾಡಿದ್ದ ಜೆಕೆಯನ್ನು ಪತ್ರಿಕೆಯೊಂದು ಹಿಂದಿ ಧಾರವಾಹಿಗಳಲ್ಲಿ ನಂ.1 ರಾವಣ ಎಂದು ಮೆಚ್ಚಿ ಬರೆದಿತ್ತು.

ಇದನ್ನು ಉಲ್ಲೇಖಿಸಿ ಜೆಕೆ ತಮ್ಮ ಫೇಸ್ ಬುಕ್ ನಲ್ಲಿ ‘ನನ್ನನ್ನು ಗುರುತಿಸಿ ಅವಕಾಶ ಕೊಟ್ಟ ಬಾಲಿವುಡ್ ಗೆ ಧನ್ಯವಾದಗಳು. ಕನ್ನಡದಲ್ಲಿ ಯಾವ ಪೌರಾಣಿಕ ಪಾತ್ರಕ್ಕೆ ನನ್ನನ್ನು ರಿಜೆಕ್ಟ್ ಮಾಡಿದರೋ ಅದೇ ಪಾತ್ರದಲ್ಲಿ ಬಾಲಿವುಡ್ ನನ್ನನ್ನು ಗುರುತಿಸಿತು. ಸಣ್ಣ ಕೊಳದಲ್ಲಿರುವುದಕ್ಕಿಂತಲೂ ಸಮುದ್ರದಲ್ಲಿರುವುದನ್ನು ಇಷ್ಟಪಡುತ್ತೇನೆ’ ಎಂದು ಬರೆದಿದ್ದರು.

ಜೆಕೆಯ ಈ ಮಾತನ್ನು ತಪ್ಪಾಗಿ ಅರ್ಥೈಸಿದ ಅಭಿಮಾನಿಗಳು ಸಮುದ್ರ ಎಂದರೆ ಬಾಲಿವುಡ್, ಕೊಳ ಎಂದರೆ ಸ್ಯಾಂಡಲ್ ವುಡ್ ಎಂದು ಜೆಕೆ ಮೇಲೆ ಮುಗಿಬಿದ್ದರು. ಕೊನೆಗೆ ನಟ ಜೆಕೆ ತಮ್ಮ ಪೋಸ್ಟ್ ಗೆ ಸ್ಪಷ್ಟನೆ ಕೊಟ್ಟಿದ್ದು, ಸಮುದ್ರ ಎಂದರೆ ಕಷ್ಟ, ಕಷ್ಟವನ್ನು ಈಜಿ ಮೇಲೇಳಲು ಇಷ್ಟಪಡುತ್ತೇನೆ. ಕೊಳ ಎಂದರೆ ಆರಾಮವಾಗಿರಬಹುದು. ಅಲ್ಲಿ ಸವಾಲುಗಳಿರುವುದಿಲ್ಲ ಎಂಬ ಅರ್ಥದಲ್ಲಿ ಈ ಮಾತು ಹೇಳಿದ್ದೇನೆ ಎಂದು ಸ್ಪಷ್ಟನೆ ಕೊಡುವಲ್ಲಿಗೆ ಪ್ರಕರಣ ಅಂತ್ಯ ಕಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments