Webdunia - Bharat's app for daily news and videos

Install App

ನಟ ಸುದೀಪ್‌ ತಾಯಿ ನಿಧನ: ಸುದ್ದಿಗೋಷ್ಟಿ ರದ್ದು ಮಾಡಿದ ಬಿಗ್‌ಬಾಸ್‌ ಸ್ಪರ್ಧಿ ಜಗದೀಶ್

Sampriya
ಭಾನುವಾರ, 20 ಅಕ್ಟೋಬರ್ 2024 (13:40 IST)
Photo Courtesy X
ಬೆಂಗಳೂರು: ಬಿಗ್‌ಬಾಸ್ 11ನೇ ಆವೃತ್ತಿಯಿಂದ ಹೊರಬಿದ್ದಿರುವ ಸ್ಪರ್ಧಿ ಜಗದೀಶ್ ಅವರು ಇಂದು ಸಂಜೆ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನು ಸುದೀಪ್‌ ತಾಯಿ ನರೋಜಾ ಅವರ ನಿಧನದ ಪ್ರಯುಕ್ತ ರದ್ದು ಮಾಡಿದ್ದಾರೆ.

ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಬಳಿಕ ವಿಡಿಯೋ ಮಾಡಿದ್ದ ಜಗದೀಶ್ ಸುದ್ದಿಗೋಷ್ಠಿ ನಡೆಸುವುದಾಗಿ ಹೇಳಿದ್ದರು. ಆದರೆ ನಟ ಹಾಗೂ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಕಿಚ್ಚ ಸುದೀಪ್ ಅವರ ತಾಯಿ ವಿಧಿವಶವಾಗಿರುವ ಕಾರಣ ತಮ್ಮ ಪತ್ರಿಕಾಗೋಷ್ಠಿಯನ್ನು ಅವರು ರದ್ದು ಮಾಡಿದ್ದಾರೆ.

ನನ್ನ ಪ್ರೆಸ್‌ ಮೀಟ್ ಮುಂದೂಡಿದ್ದೇನೆ. ದಾದಾ ಅವರ ತಾಯಿಯ ನಿಧನ ಸಂತಾಪದ ನಡುವೆ ಈ ಸುದ್ದಿಗೋಷ್ಠಿ ನಡೆಸುವುದು ಸೂಕ್ತವಲ್ಲ ಎಂದು ಜಗದೀಶ್ ಮತ್ತೊಂದು ವಿಡಿಯೊ ಮೂಲಕ ತಿಳಿಸಿದ್ದಾರೆ.

ಸುದೀಪ್ ಅವರ ತಾಯಿ ಭಾನುವಾರ ಮುಂಜಾನೆ ಅನಾರೋಗ್ಯದ ಕಾರಣ ನಿಧನ ಹೊಂದಿದ್ದಾರೆ. ಈ ಸುದ್ದಿ ಪ್ರಕಟಗೊಂಡ ಬಳಿಕ ಲಾಯರ್ ಜಗದೀಶ್ ಅವರು ವಿಡಿಯೊ ಬಿಡುಗಡೆ ಮಾಡಿದ್ದಾರೆ.

ಸುದೀಪ್‌ ಅವರಿಗೆ ಮಾತೃ ವಿಯೋಗದಲ್ಲಿರುವುದ ನಮಗೆಲ್ಲರಿಗೂ ಬೇಸರದ ವಿಷಯ. ತಾಯಿಯ ಮಹತ್ವ ದೊಡ್ಡದು. ತಾಯಿಯನ್ನು ಕಳೆದುಕೊಳ್ಳುವ ಸಂದರ್ಭವನ್ನು ಹೇಳುವುದೇ ಕಷ್ಟ. ನಾನು ಕೂಡ 2011ರಲ್ಲಿ ನನ್ನ ತಾಯಿಯನ್ನು ಕಳೆದುಕೊಂಡಿದ್ದೆ. ಈ ವೇಳೆ ಸಾಕಷ್ಟು ನೋವು ಅನುಭವಿಸಿದ್ದೆ. ಅಂತೆಯೇ ದಾದಾ (ಸುದೀಪ್‌) ಅವರ ತಾಯಿ ನಿಧನ ಹೊಂದಿರುವ ಹೊತ್ತಲ್ಲಿ ಅವರ ಜತೆಗೆ ಇರಬೇಕಾಗಿದೆ ಎಂದು ಜಗದೀಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments