Select Your Language

Notifications

webdunia
webdunia
webdunia
webdunia

ಕನ್ನಡ ಚಿತ್ರರಂಗ ಅಷ್ಟೊಂದು ಕೆಟ್ಟು ಹೋಗಿಲ್ಲ: ಮೀಟೂ ಆರೋಪಗಳಿಗೆ ನಟಿ ತಾರಾ ಖಡಕ್ ಪ್ರತಿಕ್ರಿಯೆ

Tara Anuradha

Krishnaveni K

ಬೆಂಗಳೂರು , ಶುಕ್ರವಾರ, 6 ಸೆಪ್ಟಂಬರ್ 2024 (14:57 IST)
Photo Credit: Instagram
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ಸಮಿತಿ ರಚಿಸಿ ತನಿಖೆ ನಡೆಸುವಂತೆ ನಿನ್ನೆ ಫೈರ್ ಸಂಸ್ಥೆ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡಿತ್ತು.

ಈ ನಡುವೆ ಹಿರಿಯ ನಟಿ ತಾರಾ ಅನುರಾಧ ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಅನಿಸುವ ಪ್ರಕಾರ ಕನ್ನಡ ಚಿತ್ರರಂಗ ಅಷ್ಟೊಂದು ಕೆಟ್ಟು ಹೋಗಿಲ್ಲ. ಇಲ್ಲಿ ಅಂತಹ ಪ್ರಕರಣಗಳು ಕಡಿಮೆ ಎನ್ನುವುದು ನನ್ನ ಅಭಿಪ್ರಾಯ ಎಂದು ತಾರಾ ಅನುರಾಧ ಹೇಳಿದ್ದಾರೆ.

ಹಾಗಂತ ಇದೀಗ ಸಮಿತಿ ರಚಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದು ತಪ್ಪು ಅಂತ ನಾನು ಹೇಳಲ್ಲ ಎಂದೂ ಹೇಳಿದ್ದಾರೆ. ಯಾವುದೇ ರಂಗದಲ್ಲಾದರೂ ಲೈಂಗಿಕ ಕಿರುಕುಳ ಸಮಸ್ಯೆ ಇದ್ದೇ ಇರುತ್ತದೆ. ಅಂತಹ ಘಟನೆಗಳು ಆಗಬಾರದು. ತನಿಖೆ ನಡೆಸುವುದು ತಪ್ಪೇನಲ್ಲ. ಆದರೆ ಕನ್ನಡ ಚಿತ್ರರಂಗದ ಅಷ್ಟೊಂದು ಕೆಟ್ಟತನವಿಲ್ಲ. ಇಲ್ಲಿ ಎಲ್ಲರ ನಡುವಿನ ಬಾಂಧವ್ಯ ಚೆನ್ನಾಗಿದೆ ಎಂದು ತಾರಾ ಹೇಳಿದ್ದಾರೆ.

ನಿನ್ನೆಯಷ್ಟೇ ನಟ ಚೇತನ್ ಅಹಿಂಸಾ, ಸಾಮಾಜಿಕ ಕಾರ್ಯಕರ್ತೆ ವಿಜಯಮ್ಮ, ನಟಿಯರಾದ ಶ್ರುತಿ ಹರಿಹರನ್, ನೀತೂ, ಸಂಜನಾ ಗಲ್ರಾನಿ ಸೇರಿದಂತೆ ಹಲವರು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ವಿಶೇಷ ಸಮಿತಿ ರಚಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ರೇಣುಕಾಸ್ವಾಮಿ ಹತ್ಯೆ ಬಳಿಕ ಪವಿತ್ರಾ ಗೌಡಗೆ ಕಾಲ್ ಮಾಡಿದ್ದ ದರ್ಶನ್ ಹೇಳಿದ್ದೇನು