Webdunia - Bharat's app for daily news and videos

Install App

ಹಿಂದಿ ಭಾಷೆ ವಿಚಾರವಾಗಿ ಅಜಯ್ ದೇವಗನ್-ಕಿಚ್ಚ ಸುದೀಪ್ ಟ್ವೀಟ್ ವಾರ್

Webdunia
ಬುಧವಾರ, 27 ಏಪ್ರಿಲ್ 2022 (18:54 IST)
ಮುಂಬೈ: ಕೆಜಿಎಫ್ 2 ಸೇರಿದಂತೆ ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾಗಳು ಯಶಸ್ವಿಯಾಗುತ್ತಿರುವ ಬೆನ್ನಲ್ಲೇ ನಟ ಕಿಚ್ಚ ಸುದೀಪ್ ಹಿಂದಿ ಈಗ ರಾಷ್ಟ್ರೀಯ ಭಾಷೆಯಾಗಿ ಉಳಿದಿಲ್ಲ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆ ಬಾಲಿವುಡ್ ನಟ ಅಜಯ್ ದೇವಗನ್ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿದ್ದ ಅಜಯ್ ದೇವಗನ್, ‘ಹಿಂದಿ ರಾಷ್ಟ್ರೀಯ ಭಾಷೆ ಅಲ್ಲದೇ ಹೋದರೆ ನಿಮ್ಮ ಸಿನಿಮಾಗಳನ್ನು ಹಿಂದಿಯಲ್ಲಿ ಯಾಕೆ ಡಬ್ ಮಾಡ್ತೀರಿ? ಹಿಂದಿ ಈ ಮೊದಲೂ, ಈಗಲೂ ಮತ್ತು ಮುಂದೆಯೂ ರಾಷ್ಟ್ರೀಯ ಭಾಷೆಯಾಗಿಯೇ ಉಳಿಯಲಿದೆ’ ಎಂದು ಖಾರವಾಗಿ ಬರೆದುಕೊಂಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸುದೀಪ್, ‘ನಾನು ಹೇಳಿದ ಸಂದರ್ಭ ಏನು ಎಂಬುದು ಬಹುಶಃ ನಿಮಗೆ ತಿಳಿದಂತೆ ಅನಿಸುತ್ತಿಲ್ಲ. ಈ ಹೇಳಿಕೆ ಯಾಕೆ ಕೊಟ್ಟೆ ಎಂಬುದನ್ನು ನಿಮ್ಮನ್ನು ಭೇಟಿಯಾದಾಗ ತಿಳಿಸುವೆ. ಯಾರಿಗೂ ನೋವುಂಟು ಮಾಡಲು, ವಾದಕ್ಕೆ ನಾಂದಿ ಹಾಡಲು ಈ ಹೇಳಿಕೆ ಕೊಟ್ಟಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಜಯ್ ದೇವಗನ್ ‘ಕಿಚ್ಚ ಸುದೀಪ್ ನೀವು ನನ್ನ ಗೆಳೆಯ. ಅಪಾರ್ಥ ಸರಿಪಡಿಸಿದ್ದಕ್ಕೆ ಧನ್ಯವಾದಗಳು. ಎಲ್ಲಾ ಭಾಷೆಯೂ ಒಂದೇ ಎಂದು ನಾನು ನಂಬುತ್ತೇನೆ. ಬಹುಶಃ ಭಾಷಾಂತರಿಸುವಾಗ ಏನಾದರೂ ಮಿಸ್ ಆಗಿರಬೇಕು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments