Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ವಿರುದ್ಧ ಕುಣಿಗಲ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬ್ರಾಹ್ಮಣ ಸಮುದಾಯ ಚೇತನ್ ವಿರುದ್ಧ ದೂರು ನೀಡಿದೆ.
ಈಗಾಗಲೇ ಬೆಂಗಳೂರಿನಲ್ಲಿ ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಚೇತನ್ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಕುಣಿಗಲ್ ಠಾಣೆಯಲ್ಲಿ ಬ್ರಾಹ್ಮಣ ಸಂಘ ದೂರಿದೆ.
ಚೇತನ್ ಹೇಳಿಕೆಯಿಂದ ಬ್ರಾಹ್ಮಣ ಸಮುದಾಯದ ಗೌರವಕ್ಕೆ ಧಕ್ಕೆಯಾಗಿದೆ. ಅವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಬ್ರಾಹ್ಮಣರು ಭಯೋತ್ಪಾಕದರು ಎಂದು ವಿಡಿಯೋ ಸಂದೇಶವೊಂದರಲ್ಲಿ ಚೇತನ್ ಹೇಳಿರುವುದು ಬ್ರಾಹ್ಮಣ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ