Webdunia - Bharat's app for daily news and videos

Install App

BBK 11: ಕೊರಗಜ್ಜ ಸ್ವಾಮಿಯ ನೆನೆದು ಬಚಾವ್ ಆದ ಧನರಾಜ್ ಆಚಾರ್

Krishnaveni K
ಸೋಮವಾರ, 13 ಜನವರಿ 2025 (11:07 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11 ಈಗ ಕೊನೆಯ ಘಟ್ಟಕ್ಕೆ ಬಂದಿದ್ದು, ನಿನ್ನೆಯ ಎಪಿಸೋಡ್ ನಲ್ಲಿ ಚೈತ್ರಾ ಕುಂದಾಪುರ್ ಎಲಿಮಿನೇಟ್ ಆಗಿದ್ದಾರೆ. ಆದರೆ ಎಲಿಮಿನೇಷನ್ ತೂಗುಗತ್ತಿಯಲ್ಲಿದ್ದ ಧನರಾಜ್ ಆಚಾರ್ ಕೊರಗಜ್ಜ ಸ್ವಾಮಿಯ ನೆನೆದು ಬಚಾವ್ ಆಗಿದ್ದಾರೆ.

ಚೈತ್ರಾ ಕುಂದಾಪುರ ಮನೆಯಿಂದ ಹೊರ ಹೋಗುವಾಗ ತುಂಬಾ ಅತ್ತಿದ್ದರು. ಈ ಮನೆಯ ಅನ್ನದ ಋಣ ಮುಗಿಯಿತು ಎಂದು ಹೇಳುತ್ತಲೇ ಮನೆಯಿಂದ ಹೊರ ಹೋದರು. ವೇದಿಕೆಯಲ್ಲೂ ಫೈನಲ್ ತನಕ ಬರಲಾಗಲಿಲ್ಲ ಎಂದು ಬೇಸರ ಹೊರಹಾಕಿದ್ದರು.

ಎಲಿಮಿನೇಷನ್ ಪ್ರಕ್ರಿಯೆಯಲ್ಲಿ ಕಿಚ್ಚ ಸುದೀಪ್ ಮನೆಯಲ್ಲಿ ಬಿಗ್ ಬಾಸ್ ಮನೆಯಲ್ಲಿ ಒಂದು ಲಕೋಟೆಯಿದೆ. ಅದರಲ್ಲಿ ಸೇಫ್ ಆದವರ ಹೆಸರು ಇರುತ್ತದೆ ಎಂದಿದ್ದರು. ಧನರಾಜ್ ಮತ್ತು ಚೈತ್ರಾ ಮನೆಯೆಲ್ಲಾ ಹುಡುಕಾಡಿ ಪತ್ರ ಪತ್ತೆ ಹಚ್ಚಿದರು.

ಹೀಗೆ ಪತ್ರ ಹುಡುಕುವಾಗ ಧನರಾಜ್ ದಕ್ಷಿಣ ಕನ್ನಡದ ಪ್ರಸಿದ್ಧ ದೈವ ಕೊರಗಜ್ಜ ಸ್ವಾಮಿಯನ್ನು ನೆನೆಯುತ್ತಲೇ ಹುಡುಕಿದರು. ಕೊರಗಜ್ಜ ಸ್ವಾಮಿಗೆ ಭಕ್ತಿಯಿಂದ ಬೇಡಿಕೊಂಡರೆ ದೈವ ಈಡೇರಿಸುತ್ತದೆ ಎಂಬ ನಂಬಿಕೆ ವಿಶೇಷವಾಗಿ ದಕ್ಷಿಣ ಕನ್ನಡದವರಲ್ಲಿದೆ. ಇದೀಗ ಧನರಾಜ್ ಕೂಡಾ ಕೊರಜ್ಜ ಸ್ವಾಮಿಯನ್ನು ನೆನೆಸಿಕೊಂಡೇ ಪತ್ರ ಹುಡುಕಿದರು. ವಿಶೇಷ ಎಂದರೆ ಅವರು ಸೇಫ್ ಆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments