Webdunia - Bharat's app for daily news and videos

Install App

BBK10: ಹೊರಬಿದ್ದ ವರ್ತೂರು ಸಂತೋಷ್, ತುಕಾಲಿ ಕಣ್ಣೀರು

Krishnaveni K
ಭಾನುವಾರ, 14 ಜನವರಿ 2024 (09:55 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಕುಚಿಕು ಗೆಳೆಯರಂತಿದ್ದ ವರ್ತೂರು ಸಂತೋಷ್ ಮತ್ತು ತುಕಾಲಿ ಸಂತೋಷ್ ಜೋಡಿ ಬೇರ್ಪಟ್ಟಿದೆ.

ಸಂತೋಷ್ ಧ್ವಯರ ಪೈಕಿ ಇದೀಗ ವರ್ತೂರು ಸಂತೋಷ್ ಮನೆಯಿಂದ ಹೊರಬಿದ್ದಿದ್ದಾರೆ. ಈ ವಾರ ವರ್ತೂರು ಸಂತೋಷ್ ಎಲಿಮಿನೇಟ್ ಆಗುತ್ತಿರುವ ಸುದ್ದಿ ಕೇಳಿ ತುಕಾಲಿ ಸಂತೋಷ್ ಕಣ್ಣೀರಿಟ್ಟು ಬೀಳ್ಕೊಟ್ಟಿದ್ದಾರೆ.

ಇನ್ನು, ಫೈನಲ್ ಗೆ ಕೆಲವೇ ದಿನಗಳಿರುವಾಗ ವರ್ತೂರು ಸಂತೋಷ್ ಮನೆಯಿಂದ ಎಲಿಮಿನೇಟ್‍ ಆಗಿರುವುದು ಅವರ ಅಭಿಮಾನಿಗಳಿಗೆ ತೀವ್ರ ಬೇಸರ ತಂದಿದೆ. ವರ್ತೂರು ಫೈನಲ್ ನಲ್ಲಿರಲಿದ್ದಾರೆ ಎಂಬುದೇ ಎಲ್ಲರ ಲೆಕ್ಕಾಚಾರವಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಮನೆಯಿಂದ ಹೊರಬಿದ್ದಿರುವುದಕ್ಕೆ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸೀಸನ್ ನಲ್ಲಿ ವರ್ತೂರು ಸಂತೋಷ್ ತಮ್ಮ ಖಾಸಗಿ ಸಮಸ್ಯೆಗಳಿಂದಲೇ ಸುದ್ದಿಯಾಗಿದ್ದರು. ಹುಲಿ ಉಗುರು ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದ ವರ್ತೂರು ಸಂತೋಷ್ ಬಳಿಕ ಮದುವೆ ವಿಚಾರಕ್ಕೆ ಸುದ್ದಿಯಾದರು. ಅದಾದ ಬಳಿಕ ಮನೆಯಿಂದ ಹೊರಹೋಗುವುದಾಗಿ ಡ್ರಾಮಾವೇ ನಡೆದು ಹೋಯಿತು. ಇದೆಲ್ಲದರ ನಡುವೆಯೂ ಇತ್ತೀಚೆಗಿನ ವಾರಗಳಲ್ಲಿ ಅವರು ಉತ್ತಮ ಆಟವಾಡಿ ಜನರ ಮನಸ್ಸು ಗೆಲ್ಲಲು ಸಫಲರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments