Webdunia - Bharat's app for daily news and videos

Install App

ರೇಣುಕಾಸ್ವಾಮಿ ಪ್ರಕರಣದ ಬಳಿಕ ದರ್ಶನ್ ರಲ್ಲಿದೆ ಕಾಣ್ತಿದೆ ಈ ದೊಡ್ಡ ಬದಲಾವಣೆ

Krishnaveni K
ಗುರುವಾರ, 16 ಜನವರಿ 2025 (09:27 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ನಟ ದರ್ಶನ್ ಗೆ ಒಂದು ಪಾಠ ಕಲಿಸಿದಂತಿದೆ. ಜೈಲಿನಿಂದ ಹೊರ ಬಂದ ಬಳಿಕ ದರ್ಶನ್ ರಲ್ಲಿದೆ ಈ ಒಂದು ಬದಲಾವಣೆ ಕಾಣ್ತಿದೆ.

ನಟ ದರ್ಶನ್ ಈ ಮೊದಲು ಕೇವಲ ತಮ್ಮ ಫ್ರೆಂಡ್ಸ್ ಎಂದು ತಮ್ಮ ಒಂದಿಷ್ಟು ಬಳಗದ ಜೊತೆ ಮಾತ್ರ ಸುತ್ತುತ್ತಿದ್ದರು. ಅವರು ಕುಟುಂಬ ಸದಸ್ಯರ ಜೊತೆಗಿರುವ ಫೋಟೋಗಳು ಹೊರಗೆ ಬರುತ್ತಿದ್ದುದೇ ಅಪರೂಪ. ಆದರೆ ಈಗ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್ ಆಗಿದ್ದಾರೆ.

ದರ್ಶನ್ ಜೈಲಿನಲ್ಲಿದ್ದಾಗಲೇ ಮಗನಿಗೆ ಇನ್ನು ಮುಂದೆ ಕೆಲವೊಬ್ಬರ ಸಹವಾಸ ಬಿಡುವುದಾಗಿ ಪ್ರಾಮಿಸ್ ಮಾಡಿದ್ದಾರೆ ಎಂದು ಸುದ್ದಿಯಾಗಿತ್ತು. ಅದೀಗ ನಿಜವಾಗಿರುವಂತೆ ಕಾಣುತ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ಮೊನ್ನೆ ಸಂಕ್ರಾಂತಿ ದಿನ ತಮ್ಮ ಮಗ, ಪತ್ನಿ, ಸಹೋದರನ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದರು. ಅವರೊಂದಿಗೆ ಆತ್ಮೀಯವಾಗಿ ಕಾಲ ಕಳೆಯುತ್ತಿರುವ ಫೋಟೋಗಳು ಎಲ್ಲರ ಗಮನ ಸೆಳೆದಿದೆ.

ನಿನ್ನೆ ಕೂಡಾ ತಮ್ಮ ಪತ್ನಿ, ಮಗನ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇದಕ್ಕೆ ಮೊದಲು ಜೈಲಿನಿಂದ ಹೊರಬಂದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಭೇಟಿ ಕೊಟ್ಟಾಗ ತಾಯಿ ಮತ್ತು ಕುಟುಂಬ ಸದಸ್ಯರೊಡನೆ ಕಾಲ ಕಳೆಯುತ್ತಿರುವ ಫೋಟೋಗಳು ವೈರಲ್ ಆಗಿದ್ದವು.

ಇಷ್ಟು ದಿನ ಕೇವಲ ತಮ್ಮದೇ ಹುಡುಗರ ಗ್ಯಾಂಗ್ ಕಟ್ಟಿಕೊಂಡು ಸುತ್ತಾಡುತ್ತಿದ್ದ ದರ್ಶನ್ ಈಗ ಪಾಠ ಕಲಿತಂತಿದೆ. ಜೈಲಿನಿಂದ ಹೊರಬಂದ ಮೇಲೆ ತಮ್ಮ ಪತ್ನಿ, ಮಗ ಕುಟುಂಬದವರ ಜೊತೆಗೇ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಇದು ಅಭಿಮಾನಿಗಳಿಗೂ ಖುಷಿ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ