Webdunia - Bharat's app for daily news and videos

Install App

ಬೃಂದಾವನ ನಟ ವರುಣ್ ಆರಾಧ್ಯ ವಿರುದ್ಧ ಠಾಣೆ ಮೆಟ್ಟಿಲೇರಿದ ಹಳೇ ಪ್ರೇಯಸಿ

Sampriya
ಬುಧವಾರ, 11 ಸೆಪ್ಟಂಬರ್ 2024 (17:01 IST)
Photo Courtesy X
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಪ್ರೇಯಸಿಯ ಖಾಸಗಿ ವಿಡಿಯೋ ಹಾಗೂ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ ಆರೋಪದಡಿಯಲ್ಲಿ ನಟ ವರುಣ್ ಆರಾಧ್ಯ ಮೇಲೆ ಪ್ರಕರಣ ದಾಖಲಾಗಿದೆ.

ಬೃಂದಾವನ ಸೀರಿಯಲ್ ನಟ ವರುಣ್ ಆರಾಧ್ಯ ಮೇಲೆ ಮಾಜಿ ಪ್ರೇಯಸಿ ಠಾಣೆ ಮೆಟ್ಟಿಲೇರಿದ್ದು ಅದರಂತೆ ನಟನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ವರುಣ್ ಆರಾಧ್ಯ ಅವರು ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಿದ್ದ ಬೃಂದಾವನ ಸೀರಿಯಲ್‌ನಲ್ಲಿ ನಟಿಸಿದ್ದರು. ಅದಲ್ಲದೆ ಇವರು ತಮ್ಮ ರೀಲ್ಸ್ ಮೂಲಕ ತುಂಬಾನೇ ಜನಮನ್ನಣೆ ಗಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ವರುಣ್ ಆರಾಧ್ಯ ಜತೆ ಪ್ರೀತಿಯಲ್ಲಿ ಬಿದ್ದು, ದೂರವಾಗಿದ್ದ ಯುವತಿ ಇದೀಗ ಠಾಣೆ ಮೆಟ್ಟಿಲೇರಿದ್ದಾರೆ. ರೀಲ್ಸ್ ಮೂಲಕ ಈ ಜೋಡಿ ಕರ್ನಾಟಕದಾದ್ಯಂತ ಗುರುತಿಸಿಕೊಂಡಿದ್ದರು. ಈಚೆಗೆ ಈ ಜೋಡಿ ಬ್ರೇಕಪ್ ಆಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ತಮ್ಮ ಮುದ್ದಾದ ರೀಲ್ಸ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದ ಈ ಜೋಡಿಯ ಬ್ರೇಕಪ್ ಸುದ್ದಿ ಚರ್ಚೆಯಾಗಿತ್ತು.

ಬಸವೇಶ್ವನಗರ ಸೆನ್ ಪೊಲೀಸ್ ಠಾಣೆಯಲ್ಲಿ ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.  ಖಾಸಗಿ ವಿಡಿಯೋ ಹಾಗೂ ಪೋಟೋಗಳನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ವರುಣ್ ಆರಾಧ್ಯ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments