Webdunia - Bharat's app for daily news and videos

Install App

ಅರ್ಜುನ ಆನೆ ಸ್ಮಾರಕಕ್ಕೆ ನೆರವು: ನುಡಿದಂತೆ ನಡೆದ ನಟ ದರ್ಶನ್

Krishnaveni K
ಗುರುವಾರ, 23 ಮೇ 2024 (14:31 IST)
ಬೆಂಗಳೂರು: ಮೈಸೂರು ಅಂಬಾರಿ ಆನೆ ಅರ್ಜುನನ ಸಮಾಧಿ ನಿರ್ಮಾಣಕ್ಕೆ ನೆರವು ನೀಡುವ ವಿಚಾರದಲ್ಲಿ ನಟ ದರ್ಶನ್ ನುಡಿದಂತೆ ನಡೆದುಕೊಂಡಿದ್ದಾರೆ. ಅರ್ಜುನನ ಸಮಾಧಿ ನಿರ್ಮಾಣಕ್ಕೆ ಅಗತ್ಯ ವಸ್ತುಗಳನ್ನು ಒದಗಿಸಿದ್ದಾರೆ.

ಕಾಡಾನೆಗಳನ್ನು ಸೆರೆ ಹಿಡಿಯಲು ಅರ್ಜುನನ್ನು ಬಳಸಲಾಗಿತ್ತು. ಈ ವೇಳೆ ಕಾಡಾನೆಗಳ ದಾಳಿಯಲ್ಲಿ ಅರ್ಜುನ ಮೃತಪಟ್ಟಿದ್ದ. ಆತನ ಸಾವಿಗೆ ಪ್ರಾಣಿಪ್ರಿಯರು ಕಣ್ಣೀರು ಮಿಡಿದಿದ್ದರು. ಬಳಿಕ ಘಟನೆ ನಡೆದ ಸ್ಥಳದಲ್ಲೇ ಅರ್ಜುನನ್ನು ಮಣ್ಣು ಮಾಡಲಾಗಿತ್ತು. ಆದರೆ ಆತನಿಗೆ ಇದುವರೆಗೆ ಸಮಾಧಿ ಮಾಡಿರಲಿಲ್ಲ.

ಕೆಲವು ದಿನಗಳ ಹಿಂದೆ ನಟ ದರ್ಶನ್ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಅರ್ಜುನನ ಸಮಾಧಿ ದುಸ್ಥಿತಿ ಬಗ್ಗೆ ಬರೆದುಕೊಂಡಿದ್ದರು. ಮಳೆಗಾಲ ಬಂದರೆ ಅರ್ಜುನನ ಸಮಾಧಿ ಸ್ಥಳ ಇನ್ನಷ್ಟು ಶೋಚನೀಯವಾಗಲಿದೆ. ಇದರ ಬಗ್ಗೆ ನಾವೆಲ್ಲರೂ ಕೈ ಜೋಡಿ ಆತನಿಗೆ ಒಂದು ಸಮಾಧಿ ನಿರ್ಮಿಸುವ ಪ್ರಯತ್ನ ಮಾಡೋಣ ಎಂದು ದರ್ಶನ್ ಕರೆ ಕೊಟ್ಟಿದ್ದರು.

ಇದೀಗ ಸ್ವತಃ ದರ್ಶನ್ ಸಮಾಧಿ ನಿರ್ಮಿಸಲು ಬೇಕಾದ ಅಗತ್ಯ ವಸ್ತುಗಳನ್ನು ಒದಗಿಸಿದ್ದಾರೆ. ದರ್ಶನ್ ಅಭಿಮಾನಿಗಳ ಬಳಗ ಸಾಮಗ್ರಿಗಳನ್ನು ಈಗಾಗಲೇ ಸಮಾಧಿ ಸ್ಥಳಕ್ಕೆ ತಂದು ಕೆಲಸ ಶುರು ಮಾಡಿದೆ. ಕಷ್ಟಪಟ್ಟು ಕಾಡಿನಲ್ಲಿ ಟ್ರ್ಯಾಕ್ಟರ್ ಸಹಾಯದಿಂದ ಮಾರ್ಬಲ್ ಗಳು, ಕಲ್ಲುಗಳ ಲೋಡ್ ನ್ನು ಎಳೆದು ತರುತ್ತಿರುವ ದೃಶ್ಯಗಳನ್ನು ದರ್ಶನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಈಗಾಗಲೇ ಸಮಾಧಿ ನಿರ್ಮಾಣ ಕೆಲಸವೂ ಶುರುವಾಗಿದೆ. ಆ ಮೂಲಕ ದರ್ಶನ್ ನುಡಿದಂತೆ ನಡೆದುಕೊಂಡಿದ್ದು, ಪ್ರಾಣಿ ಪ್ರೀತಿಯನ್ನು ಸಾಬೀತುಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments