Webdunia - Bharat's app for daily news and videos

Install App

ದರ್ಶನ್ ಆಂಡ್ ಗ್ಯಾಂಗ್ ಗೆ ಮತ್ತೆ ಜೈಲೇ ಗತಿ: ಇನ್ನೆಷ್ಟು ದಿನ ಜೈಲು ವಾಸ ಇಲ್ಲಿದೆ ವಿವರ

Krishnaveni K
ಬುಧವಾರ, 14 ಆಗಸ್ಟ್ 2024 (15:56 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಆಂಡ್ ಗ್ಯಾಂಗ್ ಗೆ ಮತ್ತೆ ಜೈಲೇ ಗತಿಯಾಗಿದೆ. ನ್ಯಾಯಾಧೀಶರು ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿದ್ದಾರೆ.

ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಆಗಸ್ಟ್ 28 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಲಾಗಿದೆ. ಇಂದು ದರ್ಶನ್ ಮತ್ತು ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಗಿದಿತ್ತು. ಹೀಗಾಗಿ ಅವರನ್ನು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ಭದ್ರತಾ ದೃಷ್ಟಿಯಿಂದ ದರ್ಶನ್ ಮತ್ತು ಇತರರನ್ನು ನೇರವಾಗಿ ಕೋರ್ಟ್ ಗೆ ಹಾಜರುಪಡಿಸುತ್ತಿಲ್ಲ. ಬದಲಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕವೇ ಎಲ್ಲಾ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನ ಅವಧಿ ಮುಂದುವರಿಸಲು ಪೊಲೀಸರು ಮನವಿ ಮಾಡಿದರು. ಇದನ್ನು ನ್ಯಾಯಾಧೀಶರು ಪುರಸ್ಕರಿಸಿದ್ದರು.

ನಾಲ್ವರು ಆರೋಪಿಗಳನ್ನು ತುಮಕೂರಿನ ಜೈಲಿನಲ್ಲಿರಿಸಲಾಗಿದೆ. ಅವರು ಈಗ ತಪ್ಪೊಪ್ಪಿಕೊಂಡು ಅಪ್ರೂವರ್ ಆಗಿ ಬದಲಾಗಿದ್ದಾರೆ. ದರ್ಶನ್ ಪ್ರಕರಣದಲ್ಲಿ ಪೊಲೀಸರು ಇನ್ನೂ ಚಾರ್ಜ್ ಶೀಟ್ ಸಲ್ಲಿಕೆ ಮಾಡಿಲ್ಲ. ಹೀಗಾಗಿ ದರ್ಶನ್ ಪರ ವಕೀಲರು ಇನ್ನೂ ಜಾಮೀನಿಗೆ ಅರ್ಜಿ ಹಾಕಲು ಸಾಧ್ಯವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments