Webdunia - Bharat's app for daily news and videos

Install App

ಜೈಲು ಸೇರಿದ ದಾಸ, ಬಿಗ್‌ಬಾಸ್ ಖ್ಯಾತಿಯ ವಿನಯ್‌ಗೆ ಹೊಸ ತಲೆಬಿಸಿ

Sampriya
ಮಂಗಳವಾರ, 25 ಜೂನ್ 2024 (18:47 IST)
photo Courtesy Instagram
ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಯಾಗಿ ಬಂಧನವಾಗುತ್ತಿದ್ದ ಹಾಗೇ ಬಿಗ್‌ಬಾಸ್‌ ಖ್ಯಾತಿಯ ವಿನಯ್ ಗೌಡ ಅವರಿಗೆ ದೊಡ್ಡ ಚಿಂತೆ ಶುರುವಾಗಿದೆ.

ದರ್ಶನ್ ಬಂಧನ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ ವಿನಯ್ ಗೌಡ ಅವರು, ನಾನು ಬಿಗ್‌ಬಾಸ್‌ನಿಂದ ಬಂದ್ಮೇಲೆ ಸಿಕ್ಕಾ ಮೊದಲ ಪ್ರಾಜೆಕ್ಟ್ ಡೆವಿಲ್ ಆಗಿತ್ತು. ನನ್ನ ನಟನೆಯನ್ನು ಗುರುತಿಸಿ ಮಿಲನ ಪ್ರಕಾಶ್ ಅವರು ನನಗೆ ಈ ದೊಡ್ಡ ಅವಕಾಶವನ್ನು ನೀಡಿದ್ದರು.

ನನ್ನನ್ನು  ಮಾತಿಗೆ ಕರೆದ ಮಿಲನ ಪ್ರಕಾಶ್ ಅವರು, ಒಳ್ಳೆಯ ಸ್ಟಾರ್ ನಟನ ಜತೆ ನಿಮಗೆ ವಿಲನ್ ಪಾತ್ರ ಇದೆ ಎಂದು ಹೇಳಿದರು.   ಆ ಮೇಲೆ ನನಗೆ ಅದು 'ಡೆವಿಲ್' ಸಿನಿಮಾ ಎಂದು ತಿಳಿಯಿತು. ಈಗಾಗಲೇ ನನ್ನ ಭಾಗದ 30% ಶೂಟಿಂಗ್ ಮುಗಿದಿದ್ದು, ದರ್ಶನ್ ಅವರೊಂದಿಗಿನ ಕೆಲ ಡೈಲಾಗ್ ಅಷ್ಟೇ ಬಾಕಿ ಉಳಿದಿತ್ತು ಎಂದರು.

ಡೆವಿಲ್ ಸಿನಿಮಾ ನನ್ನ ವೃತ್ತಿ ಬದುಕಿಗೆ ದೊಡ್ಡ ಸಿನಿಮಾ ಆಗಿದೆ.  ಈ ಪ್ರಾಜೆಕ್ಟ್ ಬಗ್ಗೆ ನೆಗೆಟಿವ್ ಆಗಿ ಯೋಚನೆ ಮಾಡೋದಿಲ್ಲ. ಆದರೆ ಕೈತಪ್ಪಿದರೆ ನಿಜಕ್ಕೂ ಬೇಸರ ಆಗುತ್ತೆ, ಅದರಲ್ಲಿ ಸಂದೇಹ ಇಲ್ಲ ಎಂದು ವಿನಯ್ ಕಳವಳ ವ್ಯಕ್ತಪಡಿಸಿದರು.

ಕಾನೂನು ಪ್ರಕಾರ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ.  ಹೀಗಾಗಿ ನಾನು ದರ್ಶನ್ ಅವರ ಬಗ್ಗೆ ಮಾತಾಡೋದು ಸರಿ ಇಲ್ಲ. ಎಲ್ಲವೂ ಖುಷಿ ಖುಷಿಯಾಗಿ ಮುಗಿಯಲಿ ಅಂತ ಆಶಿಸುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments