Webdunia - Bharat's app for daily news and videos

Install App

ಅಭಿಮಾನಿಗಳು ಕೊಟ್ಟ ಉಡುಗೊರೆಯನ್ನು ಬಡವರಿಗೆ ವಿತರಿಸಿದ ದರ್ಶನ್

Krishnaveni K
ಶನಿವಾರ, 17 ಫೆಬ್ರವರಿ 2024 (10:14 IST)
ಬೆಂಗಳೂರು: ನಿನ್ನೆ ಹುಟ್ಟುಹಬ್ಬ ನಿಮಿತ್ತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅನೇಕರು ದಿನಸಿ ಸಾಮಾಗ್ರಿಗಳನ್ನು ಉಡುಗೊರೆಯಾಗಿ ನೀಡಿದ್ದರು. ಇದನ್ನು ಅವರು ಬಡವರು, ಅನಾಥಾಶ್ರಮಕ್ಕೆ ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ.

ಸಂಜೆ ಸ್ವತಃ ದರ್ಶನ್ ಆಹಾರ ಸಾಮಗ್ರಿಗಳನ್ನು ಬಡವರಿಗೆ ಹಂಚುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಷ್ಟೇ ಅಲ್ಲದೆ, ಸರ್ಕಾರೀ ಶಾಲೆಯ ಮಕ್ಕಳಿಗೆ ಪರೀಕ್ಷಾ ಸಾಮಗ್ರಿಗಳನ್ನು ವಿತರಿಸಿ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿಸಿದ್ದಾರೆ.

ಮೊನ್ನೆ ಮಧ‍್ಯರಾತ್ರಿಯಿಂದಲೂ ಅಭಿಮಾನಿಗಳನ್ನು ಭೇಟಿ ಮಾಡಿದ ದರ್ಶನ್ ನಿನ್ನೆಯೂ ಅದನ್ನು ಮುಂದುವರಿಸಿದ್ದರು. ಮನೆಯ ಮುಂದೆ ಹಾಕಲಾಗಿದ್ದ ವಿಶೇಷ ಪೆಂಡಾಲ್ ನಲ್ಲಿ ಸರತಿ ಸಾಲಿನಲ್ಲಿ ಬರುವ ಅಭಿಮಾನಿಗಳ ಕೈಕುಲುಕಿ ಶುಭಾಶಯ ಸ್ವೀಕರಿಸಿದರು. ಬಳಿಕ ಬಂದ ಎಲ್ಲಾ ಅಭಿಮಾನಿಗಳಿಗೆ ಊಟ ಹಾಕಿ ಕಳುಹಿಸಿದ್ದಾರೆ.

ತಮ್ಮ ಹುಟ್ಟುಹಬ್ಬಕ್ಕೆ ಕೇಕ್, ಹಾರ ತರುವುದು ಬೇಡ. ಅದರ ಬದಲು ಬಡವರಿಗೆ ದಾನ ಮಾಡಲು ನಿಮ್ಮ ಕೈಲಾದ ದಿನಸಿ ವಸ್ತುಗಳನ್ನು ನೀಡಿ ಎಂದು ದರ್ಶನ್ ಮನವಿ ಮಾಡಿದ್ದರು. ಅದರಂತೆ ಹಲವರು ಅಕ್ಕಿ, ಬೇಳೆ, ಗೋಧಿ ಹಿಟ್ಟು ಎಂದು ತಮಗೆ ತೋಚಿದ ವಸ್ತುಗಳನ್ನು ತಂದುಕೊಟ್ಟಿದ್ದರು.

ಇವೆಲ್ಲವನ್ನೂ ದರ್ಶನ್ ತಮ್ಮ ಸಂಗಡಿಗರ ಜೊತೆಗೂಡಿ ಅರ್ಹರಿಗೆ ತಲುಪಿಸುವ ವ್ಯವಸ್ಥೆ ಮಾಡುತ್ತಿದ್ದಾರೆ. ಹುಟ್ಟುಹಬ್ಬದ ನಿಮಿತ್ತ ಅನಗತ್ಯ ಖರ್ಚು ಮಾಡುವ ಬದಲು ಅಭಿಮಾನಿಗಳು ಈ ರೀತಿ ಅಭಿಮಾನ ತೋರಿಸಿ ಮಾದರಿಯಾಗಿರುವುದು ಅಭಿನಂದನಾರ್ಹವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments