Webdunia - Bharat's app for daily news and videos

Install App

ಜೈಲಿನಲ್ಲಿ ವರ್ಕೌಟ್ ಇಲ್ಲ, ದೇಹ ದಂಡಿಸಲು ಹೊಸ ಉಪಾಯ ಕಂಡುಕೊಂಡ ದರ್ಶನ್

Krishnaveni K
ಭಾನುವಾರ, 14 ಜುಲೈ 2024 (11:44 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಜೈಲಿನಲ್ಲಿ ದೇಹ ದಂಡಿಸಲು ಹೊಸ ಉಪಾಯ ಕಂಡುಕೊಂಡಿದ್ದಾರೆ.

ಇತ್ತೀಚೆಗಷ್ಟೇ ನಟ ದರ್ಶನ್ ನನಗೆ ಜೈಲೂಟ ಸೇರುತ್ತಿಲ್ಲ, ಅಜೀರ್ಣವಾಗುತ್ತಿದೆ. ಮನೆ ಆಹಾರ ಸೇವನೆಗೆ ಅವಕಾಶ ಕೊಡಿ ಎಂದು ಹೈಕೋರ್ಟ್ ಮೊರೆ ಹೋಗಿದ್ದರು. ಕಳೆದ ಎರಡು ವಾರಗಳಿಂದ ದರ್ಶನ್ 10 ಕೆಜಿ ತೂಕ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಈ ರೀತಿ ದೇಹ ತೂಕ ಕಳೆದುಕೊಳ್ಳುತ್ತಿರುವುದು ಅವರ ಚಿಂತೆಗೆ ಕಾರಣವಾಗಿದೆ.

ದರ್ಶನ್ ಪ್ರತಿನಿತ್ಯ ಜಿಮ್ ಮಾತ್ರ ತಪ್ಪಿಸುತ್ತಿರಲಿಲ್ಲ. ವರ್ಕೌಟ್ ಮಾಡಿ ತಮ್ಮ ದೇಹ ಕಟ್ಟಮಸ್ತಾಗಿಟ್ಟುಕೊಂಡಿದ್ದರು. ಆದರೆ ಇದೀಗ ಜೈಲಿನಲ್ಲಿ ವರ್ಕೌಟ್ ಮಾಡಲಾಗುತ್ತಿಲ್ಲ, ಒಳ್ಳೆಯ ಆಹಾರ ಸಿಗುತ್ತಿಲ್ಲ. ಇದರಿಂದ ದರ್ಶನ್ ಸೊರಗಿ ಹೋಗಿದ್ದಾರೆ. ಆದರೆ ಹೀಗೆಯೇ ಬಿಟ್ಟರೆ ತಮ್ಮ ದೇಹ ತೂಕ ಯಾವ ಮಟ್ಟಕ್ಕೆ ತಲುಪುತ್ತದೋ ಎಂಬ ಚಿಂತೆ ಶುರುವಾಗಿದೆ.

ಈ ಕಾರಣಕ್ಕೆ ದರ್ಶನ್ ಈಗ ಪ್ರತಿನಿತ್ಯ ಯೋಗ ಮಾಡುತ್ತಿದ್ದಾರಂತೆ. ಮಾನಸಿಕವಾಗಿ ಕುಗ್ಗಿ ಹೋಗಿರುವ ಅವರು ಈಗ ಯೋಗದ ಮೂಲಕ ದೈಹಿಕ ಮತ್ತು ಮಾನಸಿಕವಾಗಿ ಶಕ್ತಿ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರಂತೆ. ಇದರ ಜೊತೆಗೆ ಜೈಲಿನಲ್ಲಿರುವ ಗ್ರಂಥಾಲಯದಿಂದ ಪುಸ್ತಕ ಪಡೆದುಕೊಂಡು ಓದುತ್ತಾ ಸಮಯ ಕಳೆಯುತ್ತಿದ್ದಾರೆ. ಅದರ ಹೊರತಾಗಿ ಇತರೆ ಖೈದಿಗಳ ಜೊತೆ ಹೆಚ್ಚು ಮಾತನಾಡದೇ ಏಕಾಂಗಿಯಾಗಿ ಕಾಲ ಕಳೆಯುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments