Select Your Language

Notifications

webdunia
webdunia
webdunia
webdunia

ಕೊನೆಗೂ ಜಾಮೀನಿಗೆ ಅರ್ಜಿ ಸಲ್ಲಿಸಿದ ದರ್ಶನ್, ಅಭಿಮಾನಿಗಳಲ್ಲಿ ಹುಮ್ಮಸ್ಸು

ಕೊನೆಗೂ ಜಾಮೀನಿಗೆ ಅರ್ಜಿ ಸಲ್ಲಿಸಿದ ದರ್ಶನ್, ಅಭಿಮಾನಿಗಳಲ್ಲಿ ಹುಮ್ಮಸ್ಸು

Sampriya

ಬೆಂಗಳೂರು , ಶನಿವಾರ, 21 ಸೆಪ್ಟಂಬರ್ 2024 (16:01 IST)
ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ 92 ದಿನಗಳ ಬಳಿಕ ನಟ ದರ್ಶನ್‌ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಗರದ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೋಮವಾರ ವಿಚಾರಣೆಗೆ ಬರಲಿದೆ ಎನ್ನಲಾಗಿದೆ‌.

ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಅವರು ಕೊನೆಗೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅವರ ಅಭಿಮಾನಿಗಳು ಜಾಮೀನು ಸಿಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಈಗಾಗಲೇ ಪ್ರಕರಣದ ಎಲ್ಲ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಜಾಮೀನಿಗೆ ಕೋರ್ಟ್‌ ನಿರಾಕರಣೆ ಮಾಡಿತ್ತು. ಈಚೆಗೆ ಎ1ಆರೋಪಿ ಪವಿತ್ರಾ ಗೌಡ ಕೂಡಾ ಜಾಮೀನು ಅರ್ಜಿ ಸಲ್ಲಿಸಿದ್ದನ್ನು ಕೋರ್ಟ್‌ ವಜಾ ಮಾಡಿತ್ತು.

ಆದರೆ ದರ್ಶನ್ ಮಾತ್ರ ಇದುವರೆಗೂ ಜಾಮೀನು ಅರ್ಜಿ ಸಲ್ಲಿಸಿರಲಿಲ್ಲ. ಜಾರ್ಜ್‌ಶೀಟ್ ಬೆನ್ನಲ್ಲೇ ದರ್ಶನ್ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ ದರ್ಶನ್ ಅವರ ಪರ ವಕೀಲ ಸುನೀಲ್ ಇಂದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಭಿಮಾನಿಗಳು ಸಿಂಹಾಸನದಲ್ಲೇ ಕೂರಿಸಿದ್ದರು, ಜೈಲಿನಲ್ಲಿ ಒಂದು ಚೇರ್ ಗಾಗಿ ದರ್ಶನ್ ಗುದ್ದಾಟ