Webdunia - Bharat's app for daily news and videos

Install App

ಸರ್ಜರಿ ಮಾಡಿಸಿಕೊಳ್ಳುವ ಹೊತ್ತಿನಲ್ಲಿ ಆಸ್ಪತ್ರೆಯಲ್ಲಿ ನಟ ದರ್ಶನ್ ಹೈಡ್ರಾಮ

Krishnaveni K
ಗುರುವಾರ, 12 ಡಿಸೆಂಬರ್ 2024 (10:42 IST)
ಬೆಂಗಳೂರು: ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಬೇಕೆಂದು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಒಂದು ತಿಂಗಳು ಕಳೆದರೂ ದರ್ಶನ್ ಆಪರೇಷನ್ ಮಾಡಿಸಿಕೊಂಡಿಲ್ಲ. ನಿನ್ನೆ ದಿನವೂ ಆಪರೇಷನ್ ಮಾಡಿಸದೇ ದರ್ಶರ್ ಹೈಡ್ರಾಮಾ ಮಾಡಿದ್ದಾರೆ ಎಂದು ವರದಿಗಳು ಹೇಳುತ್ತಿವೆ.

ನಟ ದರ್ಶನ್ ಗೆ ತೀವ್ರ ಬೆನ್ನು ನೋವಿದ್ದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ಇದ್ದರೆ ಲಕ್ವ ಹೊಡೆಯುವ ಸಾಧ್ಯತೆಯಿದೆ ಎಂದೆಲ್ಲಾ ಹೇಳಿದ ಕಾರಣಕ್ಕೆ ಹೈಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಆದರೆ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಇಷ್ಟು ದಿನ ಕಳೆದರೂ ದರ್ಶನ್ ಆಪರೇಷನ್ ಮಾಡಿಸಿಕೊಂಡಿಲ್ಲ.

ಹೀಗಾಗಿ ಇದೆಲ್ಲಾ ಜಾಮೀನಿಗಾಗಿ ಮಾಡುತ್ತಿರುವ ನಾಟಕವೇ ಎಂಬ ಅನುಮಾನ ಮೂಡಿದೆ. ಈ ನಡುವೆ ಕೋರ್ಟ್ ಕೂಡಾ ಆಪರೇಷನ್ ಯಾಕೆ ಮಾಡಿಲ್ಲ ಎಂದು ಪ್ರಶ್ನೆ ಮಾಡಿದೆ. ಇದಕ್ಕೆ ಅವರ ಬಿಪಿ ವೇರಿಯೇಷನ್ ಆಗುತ್ತಿದೆ. ಈ ಕಾರಣಕ್ಕೆ ಶಸ್ತ್ರಚಿಕಿತ್ಸೆ ಮುಂದೂಡಲಾಗಿದೆ ಎಂದು ಅವರ ಪರ ವಕೀಲರು ನೆಪ ನೀಡಿದ್ದರು.

ನಿನ್ನೆ ದರ್ಶನ್ ಗೆ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಮತ್ತೆ ದರ್ಶನ್ ಹೈಡ್ರಾಮಾ ಮಾಡಿದ್ದು ಆಪರೇಷನ್ ಗೆ ಒಪ್ಪಿಲ್ಲವೆಂದು ವರದಿಗಳಿವೆ. ಹಾಗಿದ್ದರೂ ಅವರ ಚಿಕಿತ್ಸೆ ಬಗ್ಗೆ ಮಾಧ್ಯಮಗಳಿಗೆ ಯಾವುದೇ ವಿಚಾರ ಗೊತ್ತಾಗದಂತೆ ಗೌಪ್ಯತೆ ಕಾಪಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

Darshan: ಫೋನ್ ನಂಬರ್ ಕೊಡು ಎಂದು ದರ್ಶನ್ ಮುಂದೆ ಹಠ ಹಿಡಿದ ಪವಿತ್ರಾ ಗೌಡ: ದರ್ಶನ್ ಬೆನ್ನು ಬಿಡದ ಸ್ನೇಹಿತೆ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

ಮುಂದಿನ ಸುದ್ದಿ
Show comments