Publish Date: Mon, 14 Jun 2021 (10:45 IST)
Updated Date: Mon, 14 Jun 2021 (10:48 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ 8 ನೇ ಸೀಸನ್ ಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದ ಸ್ಯಾಂಡಲ್ ವುಡ್ ನಟಿ ಪ್ರಿಯಾಂಕ ತಿಮ್ಮೇಶ್ ಮಾಡಿದ ಕೆಲಸವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೆಚ್ಚಿದ್ದಾರೆ.
ಇತ್ತೀಚೆಗೆ ನಟ ದರ್ಶನ್ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಮನವಿ ಮಾಡಿದ್ದರು. ಅದಕ್ಕೆ ನೂರಾರು ಜನರು ಸ್ಪಂದಿಸಿ ಪೈಪೋಟಿಯಲ್ಲಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಸೇರಿದಂತೆ ಸೆಲೆಬ್ರಿಟಿಗಳೂ ಕೈ ಜೋಡಿಸಿದ್ದರು.
ಇದೀಗ ಬಿಗ್ ಬಾಸ್ ಖ್ಯಾತಿಯಯ ನಟಿ ಪ್ರಿಯಾಂಕ ತಿಮ್ಮೇಶ್ ಕೂಡಾ ಕೃಷ್ಣಮೃಗವೊಂದನ್ನು ದತ್ತು ಪಡೆದಿದ್ದಾರೆ. ಹೀಗಾಗಿ ದರ್ಶನ್ ಪ್ರಿಯಾಂಕಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ನಿಮ್ಮ ಕೆಲಸಕ್ಕೆ ಹೃದಯಪೂರ್ವಕ ಧನ್ಯವಾದಗಳು ಎಂದಿದ್ದಾರೆ.