Webdunia - Bharat's app for daily news and videos

Install App

ಕೊನೆಗೂ ಜೈಲಿನಲ್ಲಿರುವ ಮಗ ದರ್ಶನ್ ಭೇಟಿ ಬಂದ ತಾಯಿ ಮೀನಾ, ಸಹೋದರ ದಿನಕರ್

Krishnaveni K
ಸೋಮವಾರ, 1 ಜುಲೈ 2024 (12:46 IST)
Photo Credit: Facebook
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ರನ್ನು ನೋಡಲು ಕೊನೆಗೂ ಅವರ ತಾಯಿ ಮೀನಾ ತೂಗುದೀಪ ಹಾಗೂ ಸಹೋದರ ದಿನಕರ್ ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದಾರೆ.

ನಟ ದರ್ಶನ್ ರಿಂದ ಇತ್ತೀಚೆಗಿನ ದಿನಗಳಲ್ಲಿ ಸಹೋದರ ದಿನಕರ್ ಮತ್ತು ತಾಯಿ ಮೀನಾ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಈಗ ಮಗ ಜೈಲು ಪಾಲಾಗಿ ಎರಡು ವಾರಗಳ ಬಳಿಕ ತಾಯಿ ಮೀನಾ ತಮ್ಮ ಇನ್ನೊಬ್ಬ ಪುತ್ರ, ನಿರ್ದೇಶಕ ದಿನಕರ್ ತೂಗುದೀಪ ಜೊತೆ ಜೈಲಿಗೆ ಬಂದಿದ್ದಾರೆ.

ಕಳೆದ ವಾರವೇ ಮೀನಾ ತಮ್ಮ ಮಗನನ್ನು ನೋಡಲು ಜೈಲಿಗೆ ಬರಲಿದ್ದಾರೆ ಎಂಬ ಸುದ್ದಿಗಳಿತ್ತು. ದರ್ಶನ್ ಕೂಡಾ ತಮ್ಮ ತಾಯಿಯನ್ನು ನೋಡಲು ಆಸೆ ವ್ಯಕ್ತಪಡಿಸಿದ್ದರು ಎನ್ನಲಾಗಿತ್ತು. ಇದೀಗ ಮೀನಾ ಹಾಗೂ ದಿನಕರ್ ಜೈಲಿಗೆ ಭೇಟಿ ನೀಡಿದ್ದಾರೆ. ಆದರೆ ಈ ವೇಳೆ ಅವರು ಮಾಧ್ಯಮಗಳ ಕಣ್ಣಿಗೆ ಬೀಳದಂತೆ ಎಚ್ಚರಿಕೆ ವಹಿಸಲಾಗಿದೆ.

ಪೊಲೀಸರೇ ಅವರನ್ನು ಮಾಧ್ಯಮಗಳ ಕಣ್ಣಿಗೆ ಬೀಳದಂತೆ ಗುಟ್ಟು ಗುಟ್ಟಾಗಿ ಜೈಲಿಗೆ ಕರೆದೊಯ್ದು ದರ್ಶನ್ ಭೇಟಿ ಮಾಡಲು ವ್ಯವಸ್ಥೆ ಮಾಡಿದ್ದಾರೆ. ಮೊನ್ನೆಯಷ್ಟೇ ದರ್ಶನ್ ಆಪ್ತರಾಗಿರುವ ರಕ್ಷಿತಾ ಮತ್ತು ಪ್ರೇಮ್ ದಂಪತಿ ಜೈಲಿಗೆ ಭೇಟಿ ನೀಡಿದ್ದರು. ಇದೀಗ ದರ್ಶನ್ ತಾಯಿ, ಸಹೋದರ ಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments