Webdunia - Bharat's app for daily news and videos

Install App

ಮೈಸೂರಿನಲ್ಲೇ ದರ್ಶನ್‌ ಸಂಕ್ರಾಂತಿ ಸಡಗರ: ಬೆಕ್ಕನ್ನು ಎತ್ತಿ ಮುದ್ದಾಡಿದ ಪತ್ನಿ ವಿಜಯಲಕ್ಷ್ಮಿ

Sampriya
ಭಾನುವಾರ, 12 ಜನವರಿ 2025 (15:48 IST)
Photo Courtesy X
ಬೆಂಗಳೂರು: ನಟ ದರ್ಶನ್  ಪತ್ನಿ ವಿಜಯಲಕ್ಷ್ಮಿ ಅವರು ಇನ್‌ಸ್ಟಾಗ್ರಾಂನಲ್ಲಿಇಂದು ಮುದ್ದಾದ ಫೋಟೋ ಶೇರ್ ಮಾಡಿದ್ದಾರೆ. ಈ ಚಿತ್ರವನ್ನು ಕಂಡು ಸಾಕಷ್ಟು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್‌ ಅವರಿಗೆ ಕೋರ್ಟ್ ನೀಡಿದ ಅನುಮತಿಯಿಂದಾಗಿ ಈ ಬಾರಿಯೂ ದರ್ಶನ್ ಮಕರ ಸಂಕ್ರಾತಿ ಹಬ್ಬವನ್ನು ಮೈಸೂರಿನಲ್ಲಿ ಆಚರಿಸಲು ಸಿದ್ಧತೆ ನಡೆಸುತ್ತಿದ್ದಾರೆ.

ಪ್ರತಿ ವರ್ಷವೂ ಸಂಕ್ರಾಂತಿಯನ್ನು ದರ್ಶನ್ ಅದ್ಧೂರಿಯಾಗಿ ಆಚರಿಸುತ್ತಾರೆ. ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಹಸುಗಳಿಗೆ ಸಿಂಗರಿಸಿ ಕಿಚ್ಚು ಹಾಯಿಸುತ್ತಾರೆ. ಕುಟುಂಬದ ಸದಸ್ಯರು ಮತ್ತು ಆಪ್ತರ ಜೊತೆಗೆ ಸಡಗರದಿಂದಲೇ ಸಂಕ್ರಾಂತಿಯನ್ನು ಬರಮಾಡಿಕೊಳ್ಳುತ್ತಾರೆ. ಅದರಂತೆ ಈ ವರ್ಷವೂ ಕೂಡ ಹಬ್ಬ ಆಚರಿಸಲು ದರ್ಶನ್ ಮನೆಯಲ್ಲಿ ಭರ್ಜರಿ ತಯಾರಿ ನಡೆದಿದೆ.

ದರ್ಶನ್‌ ಅವರಿಗೆ ಬೆಂಗಳೂರು ಬಿಟ್ಟು ತೆರಳಬಾರದು ಅಂತ ಕೋರ್ಟ್ ಆದೇಶ ಇರುವುದರಿಂದ ಈ ಬಾರಿ ಸಂಕ್ರಾಂತಿ ಹಬ್ಬವನ್ನು ಎಲ್ಲಿ ಆಚರಿಸುತ್ತಾರೆ ಎಂಬ ಕುತೂಹಲ ಇತ್ತು. ಬೆಂಗಳೂರು ಕೋರ್ಟ್ ಜನವರಿ 12ರಿಂದ 17ರವೆಗೆ ಮೈಸೂರಿನಲ್ಲಿ ಇರಲು ಅನುಮತಿ ನೀಡಿರುವುದರಿಂದ ಮೈಸೂರಿನಲ್ಲಿ ನಟ ಹಬ್ಬ ಆಚರಿಸಲಿದ್ದಾರೆ. ಈ ಬಾರಿಯೂ ಹಸು, ಕುದುರೆ, ಕುರಿ ಹಾಗೂ ಮತ್ತಿತರ ಪ್ರಾಣಿಗಳನ್ನು ಸಿಂಗರಿಸಿ ಕುಟುಂಬದೊಡನೆ ಸಂಕ್ರಾಂತಿ ಹಬ್ಬವನ್ನು ಆಚರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments