Webdunia - Bharat's app for daily news and videos

Install App

ಜೈಲಿಗೆ ಬಂದ ಆಪ್ತರ ಬಳಿ ಈ ವಿಚಾರಕ್ಕೆ ಕಣ್ಣೀರು ಹಾಕಿದ ದರ್ಶನ್

Krishnaveni K
ಶುಕ್ರವಾರ, 12 ಜುಲೈ 2024 (10:47 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಈಗ ತಮ್ಮನ್ನು ಭೇಟಿಯಾಗಲು ಬಂದ ಆಪ್ತರ ಬಳಿ ಕಣ್ಣೀರು ಹಾಕಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗೆ ನಟ ದರ್ಶನ್ ರನ್ನು ಅವರ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್, ಅಕ್ಕನ ಮಗ, ನಟ ಧನ್ವೀರ್ ಮುಂತಾದವರು ಭೇಟಿಯಾಗಿದ್ದರು. ಹಾಯಾಗಿ ಓಡಾಡಿಕೊಂಡಿದ್ದ ದರ್ಶನ್ ಗೆ ಈಗ ಜೈಲು ಕಟ್ಟಿಹಾಕಿದ ಅನುಭವವಾಗುತ್ತಿದೆ. ತಮ್ಮ ಇಷ್ಟದ ಆಹಾರ, ನೀರು ಇಲ್ಲದೇ ದರ್ಶನ್ ಹೈರಾಣಾಗಿದ್ದಾರೆ.

ಅಲ್ಲದೆ, ದರ್ಶನ್ ಪ್ರತಿನಿತ್ಯ ವರ್ಕೌಟ್ ಮಾಡಿ ದೇಹ ಹುರಿಗೊಳಿಸುವ ವಿಚಾರದಲ್ಲಿ ಕಟ್ಟುನಿಟ್ಟಾಗಿದ್ದರು. ಆದರೆ ಜೈಲು ಸೇರಿದಾಗಿನಿಂದ ವರ್ಕೌಟ್ ಗೆ ಕತ್ತರಿ ಬಿದ್ದಿದೆ. ಒಂದೇ ಸೆಲ್ ನಲ್ಲಿ ಕೂತು ಕೈ ಕಾಲು ಜೋಮು ಹಿಡಿದಿದೆ. ಜೈಲೂಟ ಸೇರದೇ ಅಜೀರ್ಣವಾಗುತ್ತಿದೆ.

ಇದರಿಂದಾಗಿ ತೂಕ ಕಳೆದುಕೊಳ್ಳುತ್ತಿದ್ದಾರೆ. ಒಬ್ಬ ಕಲಾವಿದನಿಗೆ ಮುಖ್ಯವಾಗಿ ಆತನ ದೇಹ ಸೌಂದರ್ಯ ಕೂಡಾ ಮುಖ್ಯವಾಗುತ್ತದೆ. ಆದರೆ ವರ್ಕೌಟ್ ಮಾಡದೇ, ಸೂಕ್ತ ಆಹಾರವಿಲ್ಲದೇ ತಾವು ಕಷ್ಟಪಟ್ಟು ಗಳಿಸಿದ್ದ ಮೈಮಾಟ ಉಳಿಸಿಕೊಳ್ಳಲಾಗುತ್ತಿಲ್ಲ ಎಂದು ದರ್ಶನ್ ಗೆ ಚಿಂತೆ ಕಾಡಿದೆಯಂತೆ. ಇದೇ ವಿಚಾರಕ್ಕೆ ತಮ್ಮನ್ನು ಭೇಟಿ ಮಾಡಲು ಬಂದ ಆಪ್ತರ ಬಳಿ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments