Webdunia - Bharat's app for daily news and videos

Install App

ಜೈಲಿನಿಂದಲೇ ದರ್ಶನ್ ಗೆ ವಿಚಾರಣೆ ಐಟಿ ವಿಚಾರಣೆ ಸಂಕಷ್ಟ

Krishnaveni K
ಗುರುವಾರ, 26 ಸೆಪ್ಟಂಬರ್ 2024 (10:46 IST)
ಬಳ್ಳಾರಿ: ರೇಣುಕಾಸ್ವಾಮಿ ಮರ್ಡರ್ ಕೇಸ್ ಮುಚ್ಚಿಹಾಕಲು ಲಕ್ಷಾಂತರ ರೂಪಾಯಿ ಹಣ ವರ್ಗಾವಣೆ ಮಾಡಿದ್ದ ನಟ ದರ್ಶನ್ ಗೆ ಈಗ ಐಟಿ ದಾಳಿ ಸಂಕಷ್ಟ ಎದುರಾಗಿದೆ.

ರೇಣುಕಾಸ್ವಾಮಿ ಮರ್ಡರ್ ಕೇಸ್ ಮುಚ್ಚಿಹಾಕಲು ದರ್ಶನ್ 80 ಲಕ್ಷ ರೂ.ಗಳಷ್ಟು ಖರ್ಚು ಮಾಡಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಜೈಲಿನಲ್ಲಿ ರಾಜಾತಿಥ್ಯ ಪಡೆಯಲು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳೊಂದಿಗೆ 8 ಲಕ್ಷ ರೂ.ಗಳ ಡೀಲ್ ಮಾಡಿಕೊಂಡಿದ್ದರು ಎಂಬ ವದಂತಿಯೂ ಇದೆ.

ಈ ವಿಚಾರವನ್ನು ಪೊಲೀಸರು ಐಟಿ ಇಲಾಖೆಯ ಗಮನಕ್ಕೆ ತಂದಿದ್ದಾರೆ. ಈ ಹಿನ್ನಲೆಯಲ್ಲಿ ಐಟಿ ಅಧಿಕಾರಿಗಳು ದರ್ಶನ್ ಹಣಕಾಸಿನ ವ್ಯವಹಾರಕ್ಕೆ ಸಂಬಂಧಪಟ್ಟಂತೆ ದರ್ಶನ್ ರನ್ನು ವಿಚಾರಣೆ ನಡೆಸಲಿದ್ದಾರೆ. ಸತತ ಎರಡು ದಿನಗಳ ಕಾಲ ವಿಚಾರಣೆ ನಡೆಯಲಿದ್ದು, ಬಳ್ಳಾರಿ ಜೈಲಿನಿಂದಲೇ ದರ್ಶನ್ ವಿಚಾರಣೆ ಎದುರಿಸಲಿದ್ದಾರೆ.

ಈಗಾಗಲೇ ಹತ್ಯೆ ಪ್ರಕರಣದಲ್ಲಿ ಪೊಲೀಸರು ಅವರ ಬುಡಮೇಲು ಮಾಡಿ ಮಾಹಿತಿ ಕಲೆ ಹಾಕಿದ್ದರು. ದರ್ಶನ್ ವೈಯಕ್ತಿಕ ವಿಚಾರಗಳೆಲ್ಲವೂ ಈಗ ಬಹಿರಂಗವಾಗಿದೆ. ಇದೀಗ ಹಣಕಾಸಿನ ವ್ಯವಹಾರದ ಬಗ್ಗೆ ಹಲವು ವಿಚಾರಗಳು ಹೊರಬೀಳುವ ಸಾಧ್ಯತೆಯಿದೆ. ಅಷ್ಟೊಂದು ಹಣ ನಿಮಗೆ ಹೇಗೆ ಬಂತು, ಹಣದ ಮೂಲವೇನು ಎಂಬ ಬಗ್ಗೆ ಐಟಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments