Webdunia - Bharat's app for daily news and videos

Install App

Darshan Thoogudeepa: ಆರು ತಿಂಗಳ ಬಳಿಕ ಪವಿತ್ರಾ ಗೌಡರನ್ನು ಭೇಟಿ ಮಾಡಲಿರುವ ದರ್ಶನ್

Krishnaveni K
ಗುರುವಾರ, 9 ಜನವರಿ 2025 (10:28 IST)
ಬೆಂಗಳೂರು: ಬರೋಬ್ಬರಿ ಆರು ತಿಂಗಳ ಬಳಿಕ ಇಂದು ರೇಣುಕಾಸ್ವಾಮಿ ಹತ್ಯೆ ಆರೋಪಿಗಳಾದ ನಟ ದರ್ಶನ್ ಮತ್ತು ಪವಿತ್ರಾ ಗೌಡ ಪರಸ್ಪರ ಮುಖಾಮುಖಿಯಾಗಲಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಎ1 ಆರೋಪಿಯಾದರೆ ದರ್ಶನ್ ಎ2 ಆರೋಪಿ. ಇಬ್ಬರೂ ಈಗ ರೆಗ್ಯುಲರ್ ಜಾಮೀನು ಪಡೆದು ಹೊರಬಂದಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ನೀಡಿದ್ದ ಎಂಬ ಕಾರಣಕ್ಕೇ ದರ್ಶನ್ ತಮ್ಮ ಸಂಗಡಿಗರ ಸಹಾಯದಿಂದ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆಸಿ ಹಲ್ಲೆ ಮಾಡಿ ಪರಿಣಾಮ ಸಾವನ್ನಪ್ಪಿದ್ದ ಎಂಬುದು ಆರೋಪವಾಗಿದೆ.

ಈ ಪ್ರಕರಣದ ಬಳಿಕ ದರ್ಶನ್ ಮತ್ತು ಪವಿತ್ರಾ ಗೌಡ ಕೆಲವು ದಿನ ಜೈಲು ವಾಸ ಅನುಭವಿಸಿದ್ದಾರೆ. ದರ್ಶನ್ ಬಿಡುಗಡೆಗೆ ಪತ್ನಿ ವಿಜಯಲಕ್ಷ್ಮಿ ಶ್ರಮವೇ ಕಾರಣ ಎನ್ನಬಹುದು. ಹೀಗಾಗಿ ದರ್ಶನ್ ಮುಂದೆ ಪವಿತ್ರಾರಿಂದ ದೂರವಾಗಲಿದ್ದಾರೆ ಎಂಬ ಸುದ್ದಿಗಳಿತ್ತು.

ಆದರೆ ಇಂದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಖುದ್ದು ಆರೋಪಿಗಳು ಕೋರ್ಟ್ ಗೆ ಹಾಜರಾಗಲಿದ್ದಾರೆ. ನ್ಯಾಯಾಧೀಶರು ಖುದ್ದಾಗಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಿದ್ದಾರೆ.


ಹೀಗಾಗಿ ಸಿಸಿಎಚ್ 57 ರ ಕೋರ್ಟ್ ನಲ್ಲಿ ದರ್ಶನ್ ಮತ್ತು ಪವಿತ್ರಾ ಪರಸ್ಪರ ಮುಖಾಮುಖಿಯಾಗಲಿದ್ದಾರೆ. ಜಾಮೀನು ನೀಡುವ ಸಂದರ್ಭದಲ್ಲಿ ಪ್ರತೀ ತಿಂಗಳೂ ಎಲ್ಲಾ ಆರೋಪಿಗಳೂ ಕೋರ್ಟ್ ಗೆ ಹಾಜರಾಗಲು ಷರತ್ತು ವಿಧಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಮುಂದಿನ ಸುದ್ದಿ
Show comments