Webdunia - Bharat's app for daily news and videos

Install App

ಆಷಾಢ ಶುಕ್ರವಾರದಂದು ಪ್ರತೀ ವರ್ಷ ಚಾಮುಂಡಿ ದರ್ಶನಕ್ಕೆ ಬರ್ತಿದ್ದ ದರ್ಶನ್: ಇಂದು ಜೈಲಿನಲ್ಲೇ ಪ್ರಾರ್ಥನೆ

Krishnaveni K
ಶುಕ್ರವಾರ, 12 ಜುಲೈ 2024 (09:01 IST)
ಬೆಂಗಳೂರು: ಇಂದು ಆಷಾಢ ಶುಕ್ರವಾರ ದಿನ ವಿಶೇಷವಾಗಿದ್ದು, ಮೈಸೂರಿನ ನಾಡದೇವತೆ ಚಾಮುಂಡಿ ತಾಯಿಯ ದರ್ಶನಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು, ವಿಐಪಿಗಳು ಆಗಮಿಸಿ ಪೂಜೆ ಸಲ್ಲಿಸಿ ಹೋಗುತ್ತಾರೆ.

ಪ್ರತೀ ವರ್ಷ ಆಷಾಢ ಶುಕ್ರವಾರದಂದು ನಟ ದರ್ಶನ್ ತಪ್ಪದೇ ಚಾಮುಂಡಿ ತಾಯಿಯ ದರ್ಶನಕ್ಕೆ ಬರುತ್ತಾರೆ. ಆಷಾಢ ಶುಕ್ರವಾರದಂದು ತಮ್ಮ ಸಂಗಡಿಗರೊಂದಿಗೆ ಚಾಮುಂಡಿ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ಹೋಗುತ್ತಾರೆ. ಆದರೆ ಈ ಬಾರಿ ಅವರ ದುರಾದೃಷ್ಟ ಜೈಲಿನಲ್ಲಿ ಕಳೆಯುವಂತಾಗಿದೆ.

ನಟ ದರ್ಶನ್ ಹಾಗೂ ಕುಟುಂಬದವರು ಮೈಸೂರಿನ ಚಾಮುಂಡಿ ತಾಯಿಯ ಪರಮ ಭಕ್ತರು. ಆಗಾಗ ದರ್ಶನ್ ಇಲ್ಲಿಗೆ ಬಂದು ಪೂಜೆ ಮಾಡಿಸಿಕೊಂಡು ಹೋಗುತ್ತಿರುತ್ತಾರೆ. ಇದೀಗ ದರ್ಶನ್ ಬಿಡುಗಡೆಯಾಗಲಿ ಎಂದು ಅವರ ಪತ್ನಿ ವಿಜಯಲಕ್ಷ್ಮಿ ಕೂಡಾ ಚಾಮುಂಡಿ ತಾಯಿಯನ್ನು ಬೇಡಿಕೊಳ್ಳುತ್ತಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಗೆ ಈ ಬಾರಿ ದೇವಿಯ ದರ್ಶನ ನೇರವಾಗಿ ಪಡೆಯಲು ಸಾಧ್ಯವಾಗದು. ಹೀಗಾಗಿ ಜೈಲಿನಿಂದಲೇ ಕುಳಿತು ನನ್ನನ್ನು ಕಾಪಾಡು ಎಂದು ದೇವಿಗೆ ಮೊರೆಯಿಡುವ ಪರಿಸ್ಥಿತಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments