Webdunia - Bharat's app for daily news and videos

Install App

ದರ್ಶನ್‌ ಜೊತೆಗಿನ ಮನಸ್ತಾಪದ ಬಗ್ಗೆ ಮೌನ ಮುರಿದ ದಿನಕರ್‌: ದೂರ ಆಗೋ ಮಾತೇ ಇಲ್ಲ ಎಂದ ತಮ್ಮ

Sampriya
ಶನಿವಾರ, 28 ಡಿಸೆಂಬರ್ 2024 (14:21 IST)
Photo Courtesy X
ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಜೊತೆಗಿನ ಮನಸ್ತಾಪದ ಬಗ್ಗೆ ಸಹೋದರ, ನಿರ್ದೇಶಕ ದಿನಕರ ತೂಗುದೀಪ್‌ ಕೊನೆಗೂ ಮೌನಮುರಿದ್ದಾರೆ.

ನಾವು ಅಣ್ಣ-ತಮ್ಮ ಬೇರೆ ಬೇಗಿ ಆಗಿದ್ದೀವಿ ಅಂತ ಯಾರು ಹೇಳಿದ್ದು? ಫ್ಯಾಮಿಲಿಯಲ್ಲಿ ಚಿಕ್ಕಪುಟ್ಟ ಮನಸ್ತಾಪವಿತ್ತು ಅಷ್ಟೆ. ಹಾಗಂತ ದೂರ ಆಗೋ ಮಾತಿಲ್ಲ ಎಂದು ದರ್ಶನ್‌ ಜೊತೆಗೆ ಯಾವುದೇ ಮನಸ್ತಾಪ ಇಲ್ಲ ಎಂದು ದಿನಕರ್‌ ಸ್ಪಷ್ಟನೆ ನೀಡಿದ್ದಾರೆ.

ಗಂಡ-ಹೆಂಡತಿ ಮಧ್ಯೆ ಹೇಗೆ ಜಗಳವೋ, ಹಾಗೆ ಅಣ್ಣ-ತಮ್ಮ ಅಂದ ಮೇಲೆ ಇರುವುದು ಸಾಮಾನ್ಯ. ನಾವು ಮಾತಾಡ್ತಾನೇ ಇರ್ತೀವಿ. ತಿಂಗಳಿಗೊಮ್ಮೆ ಆಗೊಮ್ಮೆ ಈಗೊಮ್ಮೆ ಭೇಟಿಯಾಗ್ತೀವಿ. ಅತ್ತಿಗೆ ಜೊತೆ ಯಾವಾಗಲೂ ಕಾಂಟೆಕ್ಟ್‌ನಲ್ಲಿದ್ದೇನೆ ಎಂದು ರಾಯಲ್’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರಿಂದ ತೂರಿ ಬಂದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಈ ಸಿನಿಮಾಗೆ ದರ್ಶನ್ ಸಾಥ್ ಕೊಡಬಹುದು. ಅವರಿಗೆ ಈಗ ಬೆನ್ನುನೋವಿದೆ. ಅವರ ಚಿಕಿತ್ಸೆಗಾಗಿ ಮೈಸೂರಿಗೆ ಹೋಗಿದ್ದೀವಿ. ಡಾ.ಅಜಯ್ ಹೆಗ್ಡೆ ಎಂಬ ಪ್ರಸಿದ್ಧ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಹೇಳಿದರು.

ದರ್ಶನ್‌ ಜೊತೆ ಸಿನಿಮಾ ಮಾಡೋದು ಖಚಿತ. ಚಿತ್ರಕ್ಕೆ ನಿರ್ಮಾಪಕರ ಲಿಸ್ಟ್ ದರ್ಶನ್ ಕಡೆಗಿದೆ. ದರ್ಶನ್‌ಗೆ ಸಿನಿಮಾ ಮಾಡಬೇಕು ಅಂದಾಗ ಕಥೆ ಕೇಳಲ್ಲ. ದರ್ಶನ್ ನನಗಿಂತ ಇಂಡಸ್ಟ್ರಿಯಲ್ಲಿ ಸೀನಿಯರ್. ಅವರಿಗೆ ಎಲ್ಲವೂ ಗೊತ್ತಿದೆ ಎಂದು ಸಹೋದರನನ್ನು ಸಮರ್ಥಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಮುಂದಿನ ಸುದ್ದಿ
Show comments