Webdunia - Bharat's app for daily news and videos

Install App

ಪತ್ನಿ ತೀರಿಕೊಂಡ ದಿನ, ಸಮಯಕ್ಕೆಯೇ ಕೊನೆಯುಸಿರೆಳೆದ ದ್ವಾರಕೀಶ್

Sampriya
ಮಂಗಳವಾರ, 16 ಏಪ್ರಿಲ್ 2024 (15:25 IST)
Photo Courtesy X
ಬೆಂಗಳೂರು:  ಕರುನಾಡ ಕುಳ್ಳ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಇಂದು ಬೆಳಿಗ್ಗೆ ಹೃದಯಾಘಾತವಾಗಿದೆ. ಎಲೆಕ್ಟ್ರಾನಿಕ್​ ಸಿಟಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದು, ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ದ್ವಾರಕೀಶ್‌ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದಲ್ಲಿ ಏಳು ಬೀಳುಗಳನ್ನು ಕಂಡಿದ್ದರು. ಇನ್ನು ಸಾಹಸಿಂಹ ವಿಷ್ಣುವರ್ಧನ್ ಹಾಗೂ ಧ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿದೆ.

ಈ ಜೋಡಿ ಹಲವಾರು ಸಿನಿಮಾಗಳಲ್ಲಿ ಜೋಡಿಯಾಗಿ ನಟಿಸಿದ್ದರು. ಇನ್ನೂ ದ್ವಾರಕೀಶ್ ಅವರು ತಮ್ಮ ಮೊದಲ ಪತ್ನಿ ಅಂಬುಜ ಅವರು ತೀರಿಕೊಂಡ ದಿನವೇ ಕೊನೆಯುಸಿರೆಳೆದಿದ್ದಾರೆ. ಅಮ್ಮ ಅಂಬುಜ ಅವರು ಏಪ್ರಿಲ್ 16. 2021 ರಂದು ಮುಂಜಾನೆ 9.45 ಕ್ಕೆ ಸಾವನ್ನಪ್ಪಿದ್ದರು. ತಂದೆ ಏಪ್ರಿಲ್ 16 2024 ಇಂದು ಮುಂಜಾನೆ 9.45 ಕ್ಕೆ ಇಹ ಲೋಕ ತ್ಯಜಿಸಿದ್ದಾರೆ ಎಂದು ದ್ವಾರಕೀಶ್ ಪುತ್ರ ಯೋಗಿ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments