Webdunia - Bharat's app for daily news and videos

Install App

Mohanlal: ಹಿಂದೂಗಳಿಗೆ ಅವಮಾನ: ಕೊನೆಗೂ ಕ್ಷಮೆ ಯಾಚಿಸಿದ ಎಂಪುರಾನ್ ನಟ ಮೋಹನ್ ಲಾಲ್

Krishnaveni K
ಸೋಮವಾರ, 31 ಮಾರ್ಚ್ 2025 (12:27 IST)
ಕೊಚ್ಚಿ: ಇತ್ತೀಚೆಗಷ್ಟೇ ಬಿಡುಗಡೆಯಾದ ಮಲಯಾಳಂನ ಎಂಪುರಾನ್ ಸಿನಿಮಾದಲ್ಲಿ ಹಿಂದೂಗಳು ಮತ್ತು ಬಲಪಂಥೀಯರಿಗೆ ನೋವಾಗುವ ಅಂಶಗಳಿವೆ ಎಂಬ ಕಾರಣಕ್ಕೆ ವಿವಾದವಾಗಿತ್ತು. ಇದೀಗ ಕೊನೆಗೂ ಸಿನಿಮಾದ ದೃಶ್ಯಗಳಿಗೆ ಸಂಬಂಧಪಟ್ಟಂತೆ ನಾಯಕ ನಟ ಮೋಹನ್ ಲಾಲ್ ಕ್ಷಮೆ ಯಾಚಿಸಿದ್ದಾರೆ.

ಪೃಥ್ವಿರಾಜ್ ಸುಕುಮಾರ್ ನಿರ್ದೇಶನದ ಎಂಪುರಾನ್ ಸಿನಿಮಾದಲ್ಲಿ ರಾಜಕೀಯ ವಿಚಾರಗಳನ್ನು ತೋರಿಸುವಾಗ ಹಿಂದೂಗಳನ್ನು ವಿಲನ್ ಮತ್ತು ಮುಸ್ಲಿಮರನ್ನು ಸಂತ್ರಸ್ತರಾಗಿ ತೋರಿಸಲಾಗಿದೆ ಎಂಬ ಆಕ್ಷೇಪ ಕೇಳಿಬಂದಿದೆ. ಸಿನಿಮಾದ ಕೆಲವು ದೃಶ್ಯಗಳ ಬಗ್ಗೆ ಸ್ವತಃ ಮೋಹನ್ ಲಾಲ್ ಕಟ್ಟಾ ಅಭಿಮಾನಿಗಳೇ ಬೇಸರ ವ್ಯಕ್ತಪಡಿಸಿದ್ದರು.

ಇದರ ಬೆನ್ನಲ್ಲೇ ಮೋಹನ್ ಲಾಲ್ ಕ್ಷಮೆ ಯಾಚಿಸಿದ್ದು, ನನ್ನ ಸಿನಿಮಾದಲ್ಲಿ ಯಾವುದೇ ಒಂದು ಸಮುದಾಯ ಅಥವಾ ರಾಜಕೀಯ, ಸಿದ್ಧಾಂತಗಳಿಗೆ ನೋವಾಗುವ ರೀತಿ ದೃಶ್ಯಗಳಿರದಂತೆ ನೋಡಿಕೊಳ್ಳುವುದು ನನ್ನ ಜವಾಬ್ಧಾರಿಯಾಗಿದೆ. ಆದರೆ ಎಂಪುರಾನ್ ಸಿನಿಮಾದಲ್ಲಿ ಕೆಲವೊಂದು ದೃಶ್ಯಗಳು ನನ್ನನ್ನು ಇಷ್ಟಪಡುವ ಕೆಲವರಿಗೆ ನೋವಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ನಾವು ಈ ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲು ತೀರ್ಮಾನಿಸಿದ್ದೇವೆ’ ಎಂದಿದ್ದಾರೆ.

ಮೋಹನ್ ಲಾಲ್ ಹೇಳಿಕೆ ಬೆನ್ನಲ್ಲೇ ಚಿತ್ರತಂಡ ಕೆಲವೊಂದು ವಿವಾದಾತ್ಮಕ ದೃಶ್ಯಗಳಿಗೆ ಕತ್ತರಿ ಹಾಕಿದ್ದು ಇಂದಿನಿಂದ ಹೊಸ ವರ್ಷನ್ ಎಂಪುರಾನ್ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments