Webdunia - Bharat's app for daily news and videos

Install App

ಶಿವರಾಜ್ ಕುಮಾರ್ ಭೈರತಿ ರಣಗಲ್ ರಿಲೀಸ್ ಮುಂದೆ ಹಾಕಲು ಕಾರಣ ಹೇಳಿದ ಗೀತಕ್ಕ

Krishnaveni K
ಮಂಗಳವಾರ, 27 ಆಗಸ್ಟ್ 2024 (09:35 IST)
ಬೆಂಗಳೂರು: ಶಿವರಾಜ್ ಕುಮಾರ್ ನಾಯಕರಾಗಿರುವ ಭೈರತಿ ರಣಗಲ್ ಸಿನಿಮಾ ರಿಲೀಸ್ ಮುಂದೂಡಿಕೆಯಾಗಿದೆ. ಇದಕ್ಕೆ ಕಾರಣವೇನೆಂದೂ ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ವಿವರಿಸಿದ್ದಾರೆ.

ಎಲ್ಲಾ ಅಂದುಕೊಂಡಂತೇ ನಡೆದಿದ್ದರೆ ಇದೇ ತಿಂಗಳು ಭೈರತಿ ರಣಗಲ್ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಈಗ ಕೊನೆ ಕ್ಷಣದಲ್ಲಿ ಸಿನಿಮಾ ರಿಲೀಸ್ ಮುಂದೆ ಹಾಕಲಾಗಿದೆ. ಸಿನಿಮಾ ಕೂಡಾ ಕಂಪ್ಲೀಟ್ ಆಗಿದೆ. ಆದರೆ ದಿಡೀರ್ ಆಗಿ ಸಿನಿಮಾ ರಿಲೀಸ್ ಮುಂದೂಡಲಾಗಿದೆ.

ಗೀತಾ ಪಿಕ್ಚರ್ಸ್ ನಿರ್ಮಾಣ ಮಾಡುತ್ತಿರುವ ಭೈರತಿ ರಣಗಲ್ ಎಂಬ ಮಾಸ್ ಸಿನಿಮಾ ನವಂಬರ್ 15 ಕ್ಕೆ ಬಿಡುಗಡೆಯಾಗಲಿದೆ ಎಂದು ಘೋಷಣೆ ಮಾಡಲಾಗಿದೆ. ಸಿನಿಮಾ ರಿಲೀಸ್ ಮುಂದೂಡಿಕೆ ಮಾಡಲು ಕಾರಣವೇನೆಂದು ಗೀತಾ ಶಿವರಾಜ್ ಕುಮಾರ್ ವಿವರಿಸಿದ್ದಾರೆ. ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲಿ ಬೇರೆ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ನಮ್ಮ ಕನ್ನಡ ಸಿನಿಮಾಗಳೇ ರಿಲೀಸ್ ಆಗುತ್ತಿವೆ. ಅವರಿಗೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ನಮ್ಮ ಸಿನಿಮಾ ರಿಲೀಸ್ ಮುಂದೂಡುತ್ತಿದ್ದೇವೆ ಎಂದಿದ್ದಾರೆ.

ಭೈರತಿ ರಣಗಲ್ ಸಿನಿಮಾ ಈ ಹಿಂದೆ ಶಿವಣ್ಣ ನಾಯಕರಾಗಿ ಬಿಡುಗಡೆಯಾಗಿದ್ದ ಮುಫ್ತಿ ಸಿನಿಮಾದ ಮುಂದುವರಿದ ಭಾಗ. ಮುಫ್ತಿ ಬಾಕ್ಸ್ ಆಫೀಸ್ ನಲ್ಲಿ ಹಿಟ್ ಆಗಿತ್ತು. ಇದೀಗ ಭೈರತಿ ರಣಗಲ್ ಸಿನಿಮಾದ ಮೇಲೂ ಪ್ರೇಕ್ಷಕರು ಅಪಾರ ನಿರೀಕ್ಷೆಯಿಟ್ಟುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments