Webdunia - Bharat's app for daily news and videos

Install App

ಕನ್ನಡತಿ ಕಿರಣ್ ರಾಜ್ ಗೆ ಅಪಘಾತ: ಆಸ್ಪತ್ರೆಗೆ ದಾಖಲು

Krishnaveni K
ಬುಧವಾರ, 11 ಸೆಪ್ಟಂಬರ್ 2024 (11:17 IST)
ಬೆಂಗಳೂರು: ಕನ್ನಡತಿ ಧಾರವಾಹಿ ಖ್ಯಾತಿಯ ನಟ ಕಿರಣ್ ರಾಜ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಅವರು ಸಂಚರಿಸುತ್ತಿದ್ದ ಮರ್ಸಿಡಸ್ ಬೆಂಜ್ ಕಾರು ಅಪಘಾತಕ್ಕೀಡಾಗಿದ್ದು, ಕಾರು ಜಖಂಗೊಂಡಿದೆ. ಘಟನೆಯಲ್ಲಿ ಕಿರಣ್ ರಾಜ್ ಎದೆಯ ಭಾಗಕ್ಕೆ ಪೆಟ್ಟಾಗಿದ್ದು, ಅವರ ಜೊತೆ ಸಂಚರಿಸುತ್ತಿದ್ದ ಸಹ ನಿರ್ಮಾಪಕರು ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಿರಣ್ ರಾಜ್ ಇದೀಗ ತಮ್ಮ ನಟನೆಯ ‘ರಾನಿ’ ಸಿನಿಮಾ ಪ್ರಚಾರ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ನಡುವೆಯೇ ಈ ಘಟನೆ ನಡೆದಿದೆ. ನಟನೆಯ ಜೊತೆಗೆ ಕಿರಣ್ ರಾಜ್ ಅನೇಕ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದರ ಭಾಗವಾಗಿ ನಿನ್ನೆ ಸಿದ್ಧೇಶ್ವರ ನಿರಾಶ್ರಿತರ ಕೇಂದ್ರಕ್ಕೆ ತೆರಳಿ ಮರಳುತ್ತಿದ್ದಾಗ ಘಟನೆ ನಡೆದಿದೆ.

ಸದ್ಯಕ್ಕೆ ಅವರನ್ನು ಕೆಂಗೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ಕಿರಣ್ ರಾಜ್ ಈಗ ತಮ್ಮ ರಾನಿ ಸಿನಿಮಾ ಬಿಡುಗಡೆ ಹಂತದಲ್ಲೇ ಇಂತಹದ್ದೊಂದು ಅಪಘಾತಕ್ಕೀಡಾಗಿರುವುದು ಬೇಸರದ ಸಂಗತಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments