Webdunia - Bharat's app for daily news and videos

Install App

ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧಿಕಾರಿಗಳ ಭೇಟಿ

Krishnaveni K
ಶನಿವಾರ, 15 ಜೂನ್ 2024 (10:07 IST)
ಬೆಂಗಳೂರು: ನಟ ದರ್ಶನ್ ಮತ್ತು ಸ್ನೇಹಿತರು ಮಾಡಿದ ಹಲ್ಲೆಯಿಂದಾಗಿ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.

ಮೊನ್ನೆ ದರ್ಶನ್ ರನ್ನು ಚಿತ್ರರಂಗದಿಂದ ನಿಷೇಧಿಸುವ ಕುರಿತಾಗಿ ವಾಣಿಜ್ಯ ಮಂಡಳಿ ಸಭೆ ಸೇರಿತ್ತು. ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್ ನಮಗೆ ಈಗ ದರ್ಶನ್ ಗಿಂತ ರೇಣುಕಾಸ್ವಾಮಿ ಕುಟುಂಬಸ್ಥರು ಮುಖ್ಯ. ಅವರ ಮನೆಗೆ ಶನಿವಾರ ಭೇಟಿ ನೀಡುತ್ತೇವೆ ಎಂದಿದ್ದರು.

ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಏನು ಸಹಾಯ ಮಾಡಬಹುದು ಎಂದು ಯೋಚಿಸಿ ಅದರಂತೆ ಸಹಾಯ ಮಾಡಲಿದ್ದೇವೆ. ನಾವೆಲ್ಲರೂ ಚರ್ಚಿಸಿ ಯಾವ ರೀತಿ ಸಹಾಯ ಮಾಡದೋ ನೋಡಿಕೊಂಡು ನಮ್ಮಿಂದಾಗುವಂತಹ ಎಲ್ಲಾ ಸಹಾಯವನ್ನು ಮಾಡಲಿದ್ದೇವೆ ಎಂದಿದ್ದಾರೆ.

ಇನ್ನು ದರ್ಶನ್ ಆರೋಪಿ ಎಂದು ಸಾಬೀತಾದರೆ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಎನ್ ಎಂ ಸುರೇಶ್ ಹೇಳಿದ್ದರು. ಆದರೆ ದರ್ಶನ್ ಜೊತೆಗೆ ಅವರಿಗೆ ಬಂಡವಾಳ ಹಾಕಿದ ನಿರ್ಮಾಪಕರ ಹಿತರಕ್ಷಣೆ ಮಾಡುವುದೂ ನಮಗೆ ಮುಖ್ಯ ಎಂದಿದ್ದಾರೆ. ಪೊಲೀಸರ ಕ್ರಮ ನೋಡಿಕೊಂಡು ನಮ್ಮ ನಿರ್ಧಾರ ತಿಳಿಸಲಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments