Webdunia - Bharat's app for daily news and videos

Install App

ಕಚ್ಚೆ ಹಾಕಿಕೊಂಡು ದಿನವಿಡೀ ಟೆಂಪಲ್ ರನ್ ಮಾಡಿದ ಕಿಚ್ಚ ಸುದೀಪ್

Krishnaveni K
ಶನಿವಾರ, 27 ಏಪ್ರಿಲ್ 2024 (15:55 IST)
Photo Courtesy: Twitter
ರಾಯಚೂರು: ಶೂಟಿಂಗ್ ನಿಂದ ಕೊಂಚ ಬಿಡುವು ಪಡೆದಿರುವ ಕಿಚ್ಚ ಸುದೀಪ್ ಇಂದು ದಿನವಿಡೀ ಪತ್ನಿ ಜೊತೆ ಟೆಂಪಲ್ ರನ್ ನಡೆಸಿದ್ದಾರೆ. ಮಂತ್ರಾಲಯ ಮತ್ತು ರಾಯಚೂರಿನ ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಮೊದಲು ರಾಯಚೂರಿನ ಹನುಮ ದೇವಾಲಯಕ್ಕೆ ಭೇಟಿ ನೀಡಿದ ಸುದೀಪ್ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರು ಪಂಚೆ ಮತ್ತು ಜುಬ್ಬಾ ತೊಟ್ಟುಕೊಂಡು ಗಮನ ಸೆಳೆದರು. ಪತ್ನಿ ಪ್ರಿಯಾ ಸುದೀಪ್ ಕೂಡಾ ಸಾಥ್ ನೀಡಿದ್ದಾರೆ. ಸುದೀಪ್ ಬಂದ ಸುದ್ದಿ ತಿಳಿದು ಅನೇಕ ಅಭಿಮಾನಿಗಳು ದೇವಾಲಯದ ಸುತ್ತ ಜಮಾಯಿಸಿದ್ದರು. ಸುದೀಪ್ ವಾಹನಕ್ಕೆ ಮುತ್ತಿಗೆ ಹಾಕಿ ಸೆಲ್ಫೀಗಾಗಿ ಮುಗಿಬಿದ್ದರು.

ಇದಾದ ಬಳಿಕ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಸನ್ನಿಧಾನಕ್ಕೆ ಭೇಟಿ ನೀಡಿದರು. ಈ ವೇಳೆ ಸುದೀಪ್ ಕಚ್ಚೆ ಪಂಚೆ ಹಾಕಿಕೊಂಡು ಗಮನ ಸೆಳೆದರು. ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಪೂಜೆ ಸಲ್ಲಿಸಿದ ಬಳಿಕ ಅಲ್ಲಿಯೂ ಅವರನ್ನು ನೋಡಲು ಜನ ಸಾಗರವೇ ಹರಿದುಬಂದಿತ್ತು. ಮಂತ್ರಾಲಯದಿಂದ ಕಾರು ಏರಿ ತೆರಳುವ ಮುನ್ನ ಜನರತ್ತ ಕೈ ಬೀಸಿದ್ದಾರೆ.

ಕಿಚ್ಚ ಸುದೀಪ್ ಇದೀಗ ಮ್ಯಾಕ್ಸ್ ಸಿನಿಮಾ ಶೂಟಿಂಗ್ ನಲ್ಲಿ ತೊಡಗಿಸಿದ್ದಾರೆ. ಕೆಲವು ದಿನಗಳಿಂದ ಮ್ಯಾಕ್ಸ್ ಶೂಟಿಂಗ್ ಗಾಗಿ ಚೆನ್ನೈನಲ್ಲೇ ಬೀಡುಬಿಟ್ಟಿದ್ದಾರೆ. ನಿನ್ನೆ ಕರ್ನಾಟಕದಲ್ಲಿ ಮತದಾನವಾಗಿದ್ದರಿಂದ ಪತ್ನಿ ಸಮೇತರಾಗಿ ಬಂದು ಮತ ಚಲಾಯಿಸಿ ತೆರಳಿದ್ದರು. ಇಂದು ಕುಟುಂಬ ಸಮೇತರಾಗಿ ಟೆಂಪಲ್ ರನ್ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

ಮುಂದಿನ ಸುದ್ದಿ
Show comments