Webdunia - Bharat's app for daily news and videos

Install App

ಸಾಹಸಿಂಹ ವಿಷ್ಣುವರ್ಧನ್ ಪುಣ್ಯ ಭೂಮಿಗಾಗಿ ನಡೆಯಲಿರುವ ಹೋರಾಟಕ್ಕೆ ಕಿಚ್ಚ ಸುದೀಪ್ ಸಾಥ್

Webdunia
ಶುಕ್ರವಾರ, 15 ಡಿಸೆಂಬರ್ 2023 (10:00 IST)
ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಪುಣ್ಯ ಭೂಮಿ ಉಳಿವಿಗಾಗಿ ಡಿಸೆಂಬರ್ 17 ರಂದು ನಡೆಯಲಿರುವ ಹೋರಾಟಕ್ಕೆ ಕಿಚ್ಚ ಸುದೀಪ್ ಬೆಂಬಲ ನೀಡಲಿದ್ದಾರೆ.

ವಿಷ್ಣುವರ್ಧನ್ ಅಭಿಮಾನಿ, ವಿಷ್ಣುಸೇನಾ ಸಮಿತಿ ಮುಖ್ಯಸ್ಥ ವೀರಕಪುತ್ರ ಶ್ರೀನಿವಾಸ್ ನೇತೃತ್ವದಲ್ಲಿ ಡಿಸೆಂಬರ್ 17 ರಂದು ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಇದರಲ್ಲಿ ರಾಜ್ಯದ ಮೂಲೆ ಮೂಲೆಯಿಂದ ವಿಷ್ಣು ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.

ಅಭಿಮಾನ್ ಸ್ಟುಡಿಯೋ ಜಾಗದಲ್ಲಿರುವ ವಿಷ್ಣುವರ್ಧನ್ ಪುಣ್ಯ ಭೂಮಿ ಉಳಿಸಿಕೊಳ್ಳಲು ಈ ಹೋರಾಟ ನಡೆಯುತ್ತಿದೆ. ವಿಷ್ಣು ಸಮಾಧಿ ಸ್ಥಳವನ್ನು ನೆಲಸಮ ಮಾಡುವ ಹುನ್ನಾರ ನಡೆದಿದೆ. ಇತ್ತೀಚೆಗೆ ನಮಗೆ ಅಲ್ಲಿ ವಿಷ್ಣು ಪುಣ್ಯ ತಿಥಿಯಂದು ಹೋಗಲೂ ಬಿಡುತ್ತಿಲ್ಲ ಎಂದು ವೀರಕಪುತ್ರ ಶ್ರೀನಿವಾಸ್ ಆರೋಪಿಸಿದ್ದರು.

ಇದೇ ಕಾರಣಕ್ಕೆ ಡಿಸೆಂಬರ್ 17 ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಹೋರಾಟಕ್ಕೆ ಕಿಚ್ಚ ಸುದೀಪ್ ಕೂಡಾ ಬೆಂಬಲ ನೀಡಿದ್ದಾರೆ ಎಂದು ವೀರಕಪುತ್ರ ಶ್ರೀನಿವಾಸ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments