Webdunia - Bharat's app for daily news and videos

Install App

ಕೊನೆಗೂ ದರ್ಶನ್ ದರ್ಶನ ಪಡೆಯಲು ಬರಲಿದ್ದಾರೆ ತಾಯಿ ಮೀನಾ, ಸಹೋದರ ದಿನಕರ್

Krishnaveni K
ಗುರುವಾರ, 27 ಜೂನ್ 2024 (11:54 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತಾಯಿ ಮೀನಾ ತೂಗುದೀಪ ಮತ್ತು ಸಹೋದರ ದಿನಕರ್ ತೂಗುದೀಪ ಇಂದು ಜೈಲಿಗೆ ಭೇಟಿ ನೀಡುವ ಸಾಧ್ಯತೆಯಿದೆ.

ಜೂನ್ 11 ರಂದು ನಟ ದರ್ಶನ್ ರನ್ನು ಬಂಧನ ಮಾಡಲಾಗಿತ್ತು. ಕಳೆದ ಶನಿವಾರದಿಂದ ದರ್ಶನ್ ಇತರೆ ಆರೋಪಿಗಳ ಜೊತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದುವರೆಗೆ ಅವರ ಕುಟುಂಬದ ವತಿಯಿಂದ ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ಮಾತ್ರ ಭೇಟಿ ನೀಡಿದ್ದಾರೆ.

ಆದರೆ ಅವರ ಬಂಧನವಾದ ಬಳಿಕ ತಾಯಿ ಮೀನಾ ಜೊತೆಗೆ, ಸಹೋದರ ದಿನಕರ್ ಜೊತೆಗೆ ದರ್ಶನ್ ಗೆ ವೈಮನಸ್ಯವಿತ್ತು ಎಂಬ ವರದಿಗಳಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಇದುವರೆಗೆ ಮೀನಾ ಆಗಲೀ, ದಿನಕರ್ ಆಗಲೀ ದರ್ಶನ್ ಭೇಟಿ ಮಾಡಿರಲಿಲ್ಲ. ದರ್ಶನ್ ಪ್ರಕರಣದ ಬಗ್ಗೆ ದಿನಕರ್ ಮಾಧ್ಯಮಗಳೊಂದಿಗೂ ಮಾತನಾಡಿಲ್ಲ.

ಇದೀಗ ಕೊನೆಗೂ ಜೈಲಿನಲ್ಲಿರುವ ದರ್ಶನ್ ರನ್ನು ಭೇಟಿ ಮಾಡಲು ತಾಯಿ ಮೀನಾ ತೂಗುದೀಪ ಮತ್ತು ಸಹೋದರ ದಿನಕರ್ ಬರಲಿದ್ದಾರೆ ಎಂಬ ಸುದ್ದಿಗಳಿವೆ. ಇಂದು ಅಥವಾ ಸದ್ಯದಲ್ಲೇ ದರ್ಶನ್ ರನ್ನು ಮೀನಾ ಮತ್ತು ಸಹೋದರ ದಿನಕರ್ ಭೇಟಿ ಧೈರ್ಯ ತುಂಬುವ ಕೆಲಸ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments