Webdunia - Bharat's app for daily news and videos

Install App

ರೇಣುಕಾಸ್ವಾಮಿಗೆ ದರ್ಶನ್ ದುಡ್ಡು ಕೊಟ್ಟು ಕಳಿಸಿದ್ರಾ? ವಿನೋದ್ ರಾಜ್ ಚೆಕ್ ಕೊಟ್ಟಿದ್ದಕ್ಕೂ ಕೇಳಿಬಂತು ಅಪಸ್ವರ

Krishnaveni K
ಶನಿವಾರ, 27 ಜುಲೈ 2024 (09:09 IST)
ಬೆಂಗಳೂರು: ದರ್ಶನ್ ಆಂಡ್ ಗ್ಯಾಂಗ್ ನಿಂದ ಹತ್ಯೆಗೀಡಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಿದ್ದ ನಟ ವಿನೋದ್ ರಾಜ್ 1 ಲಕ್ಷ ರೂ.ಗಳ ಚೆಕ್ ಕೊಟ್ಟು ಬಂದಿದ್ದರು. ಆದರೆ ಇದಕ್ಕೆ ಇದೀಗ ಅದಕ್ಕೂ ಅಪಸ್ವರ ಕೇಳಿಬಂದಿದೆ.

ಕೆಲವರು ಸೋಷಿಯಲ್ ಮೀಡಿಯಾಗಳಲ್ಲಿ ವಿನೋದ್ ರಾಜ್ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ. ಆದರೆ ಮತ್ತೆ ಕೆಲವರು ಈ ದುಡ್ಡು ನೀವೇ ನಿಮ್ಮ ಕೈಯಿಂದಾನೇ ಕೊಟ್ರಾ ಇಲ್ಲಾ ದರ್ಶನ್ ನಿಮ್ಮ ಮೂಲಕ ಕೊಡಿಸಿದ್ರಾ ಎಂದು ಅಪಸ್ವರವೆತ್ತಿದ್ದಾರೆ. ರೇಣುಕಾಸ್ವಾಮಿ ಪತ್ನಿ ಹೆಸರಿನಲ್ಲಿ ಅವರ ಮನೆಯಲ್ಲಿಯೇ ವಿನೋದ್ ರಾಜ್ 1 ಲಕ್ಷ ರೂ.ಗಳ ಚೆಕ್ ಬರೆದು ಕೊಟ್ಟಿದ್ದರು.

ಈ ಚೆಕ್ ಕೊಟ್ಟಿದ್ದು ಅವರದ್ದೇ ಖಾತೆಯಿಂದ. ಆದರೂ ಆ ದುಡ್ಡು ದರ್ಶನ್ ಕೊಡಲು ಹೇಳಿರಬಹುದು ಎನ್ನುವುದು ಕೆಲವರ ಗುಮಾನಿ. ಯಾಕೆಂದರೆ ಮೊನ್ನೆಯಷ್ಟೇ ವಿನೋದ್ ರಾಜ್ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ದರ್ಶನ್ ಭೇಟಿ ಮಾಡಿ ಬಂದಿದ್ದರು. ಇದರ ಬೆನ್ನಲ್ಲೇ ವಿನೋದ್ ರಾಜ್ ಚಿತ್ರದುರ್ಗಕ್ಕೆ ತೆರಳಿ ರೇಣುಕಾಸ್ವಾಮಿ ಕುಟುಂಬದವರನ್ನು ಭೇಟಿ ಮಾಡಿರುವುದಕ್ಕೆ ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಒಂದೊಳ್ಳೆಯ ಉದ್ದೇಶದಿಂದಲೇ ವಿನೋದ್ ರಾಜ್ ಚಿತ್ರದುರ್ಗದವರೆಗೂ ತೆರಳಿ ಹಣ ಸಹಾಯ ಮಾಡಿ ಬಂದಿದ್ದಾರೆ. ಆದರೆ ಅದರಲ್ಲೂ ಕೆಲವರು ಈ ರೀತಿ ಅಪಸ್ವರವೆತ್ತುತ್ತಿರುವುದು ಮತ್ತಷ್ಟು ಜನ ಅನುಮಾನ ಪಡುವಂತೆ ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments