Webdunia - Bharat's app for daily news and videos

Install App

ಜೈಲಿನಿಂದ ಬಿಡುಗಡೆಯಾಗ್ತಿದ್ದಂತೆ ದರ್ಶನ್ ಹೆಸರಿನಲ್ಲಿ ಪವಿತ್ರಾ ಗೌಡ ಪೂಜೆ

Krishnaveni K
ಮಂಗಳವಾರ, 17 ಡಿಸೆಂಬರ್ 2024 (12:48 IST)
ಬೆಂಗಳೂರು: ರೇಣುಕಾಸ್ವಾ,ಮಿ ಮರ್ಡರ್ ಕೇಸ್ ನಲ್ಲಿ ಪವಿತ್ರಾ ಗೌಡ ಜೈಲಿನಿಂದ ಹೊರಬರುತ್ತಿದ್ದಂತೇ ತಲಘಟ್ಟದಲ್ಲಿರುವ ವಜ್ರ ಮುನೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗ ವಿಜಯಲಕ್ಷ್ಮಿ ಕೆಂಗಣ್ಣಿಗೆ ಗುರಿಯಾಗುತ್ತಾರಾ ನೋಡಬೇಕಿದೆ.

ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ನಗು ನಗುತ್ತಲೇ ಹೊರಬಂದ ಪವಿತ್ರಾ ಗೌಡ ತಾಯಿ ಜೊತೆ ತಲಘಟ್ಟದಲ್ಲಿರುವ ವಜ್ರ ಮುನೇಶ್ವರ ದೇವಾಲಯಕ್ಕೆ ತೆರಳಿದರು. ಮೊದಲು ಪವಿತ್ರ ಸ್ನಾನ ಮಾಡಿ ಬಳಿಕ ಮಡಿಯಲ್ಲೇ ದೇವರಿಗೆ ಪ್ರದಕ್ಷಿಣೆ ಹಾಕಿ ಪೂಜೆ ಸಲ್ಲಿಸಿದ್ದಾರೆ.

ಬಳಿಕ ದರ್ಶನ್ ಹೆಸರು ಹೇಳಿ ಪೂಜೆ ಮಾಡಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ನಂತರ ದರ್ಶನ್ ಮತ್ತು ಪವಿತ್ರಾ ದೂರ ದೂರವಾಗಬಹುದು ಎನ್ನಲಾಗಿತ್ತು. ಆದರೆ ಜೈಲಿನಿಂದ ಹೊರಬುರತ್ತಿದ್ದಂತೇ ಪವಿತ್ರಾ ತಮಗೆ ದರ್ಶನ್ ಮೇಲಿರುವ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ದರ್ಶನ್ ವಿಚಾರಕ್ಕೇ ಪತ್ನಿ ವಿಜಯಲಕ್ಷ್ಮಿ ಮತ್ತು ಸ್ನೇಹಿತೆ ಪವಿತ್ರಾ ಗೌಡ ಕಿತ್ತಾಡಿಕೊಂಡಿದ್ದರು. ಇದೀಗ ಜೈಲಿನಿಂದ ಹೊರಬರುತ್ತಿದ್ದಂತೇ ದರ್ಶನ್ ಹೆಸರಿನಲ್ಲಿ ಪೂಜೆ ಮಾಡಿರುವುದು ವಿಜಯಲಕ್ಷ್ಮಿ ಕೆಂಗಣ್ಣಿಗೆ ಗುರಿಯಾಗುತ್ತಾ ನೋಡಬೇಕಿದೆ. ಸದ್ಯಕ್ಕೆ ದರ್ಶನ್ ಆಸ್ಪತ್ರೆಯಲ್ಲಿದ್ದು ಇದಾದ ಬಳಿಕ ಪತ್ನಿಯ ಹೊಸಕೆರೆಹಳ್ಳಿ ಅಪಾರ್ಟ್ ಮೆಂಟ್ ಗೆ ತೆರಳಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

ಮುಂದಿನ ಸುದ್ದಿ
Show comments