Publish Date: Sat, 19 Jun 2021 (09:20 IST)
Updated Date: Sat, 19 Jun 2021 (09:22 IST)
ಬೆಂಗಳೂರು: ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯದ ಕುರಿತಾಗಿ ಹೇಳಿಕೆ ನೀಡಿ ಬ್ರಾಹ್ಮಣ ಸಮುದಾಯಕ್ಕೆ ನೋವುಂಟಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ವಿಚಾರಣೆಗೆ ಹಾಜರಾಗಲು ನಟ ಚೇತನ್ ಗೆ ನೋಟಿಸ್ ನೀಡಲಾಗಿದೆ.
ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವವನ್ನು ವಿರೋಧಿಸುವ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯವನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂದು ಚೇತನ್ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದರು. ಅವರ ಹೇಳಿಕೆ ವಿರುದ್ಧ ಬ್ರಾಹ್ಮಣ ಸಮುದಾಯ ತಿರುಗಿಬಿದ್ದಿದೆ. ಈ ಬಗ್ಗೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈಗಾಗಲೇ ಒಮ್ಮೆ ವಿಚಾರಣೆಗೆ ಹಾಜರಾಗಿರುವ ಚೇತನ್ ಗೆ ವಿಚಾರಣೆ ಪೂರ್ಣವಾಗದ ಹಿನ್ನಲೆಯಲ್ಲಿ ಮತ್ತೆ ವಿಚಾರಣೆಗೆ ಹಾಜರಾಗಲು ಪೊಲೀಸರು ಸೂಚಿಸಿದ್ದಾರೆ.