Webdunia - Bharat's app for daily news and videos

Install App

ನಟ ದರ್ಶನ್ ಶೂಟಿಂಗ್ ಗೆ ಪೊಲೀಸರಿಂದ ಟೈಟ್ ಸೆಕ್ಯೂರಿಟಿ

Krishnaveni K
ಮಂಗಳವಾರ, 11 ಮಾರ್ಚ್ 2025 (11:11 IST)
ಮೈಸೂರು: ನಾಳೆಯಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಶೂಟಿಂಗ್ ನಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಕೊಲೆ ಆರೋಪಿ ದರ್ಶನ್ ಶೂಟಿಂಗ್ ಗೆ ಪೊಲೀಸರಿಂದ ಟೈಟ್ ಸೆಕ್ಯೂರಿಟಿ ಇರಲಿದೆ.

ನಾಳೆ ಮೈಸೂರಿನ ಲಲಿತ್ ಮಹಲ್ ನಲ್ಲಿ ದರ್ಶನ್ ಡೆವಿಲ್ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಅರೆಸ್ಟ್ ಆಗುವ ಮುನ್ನ ಕೆಲವು ಭಾಗದ ಚಿತ್ರೀಕರಣ ನಡೆದಿತ್ತು. ಇದೀಗ ಮುಂದುವರಿದ ಭಾಗದ ಚಿತ್ರೀಕರಣ ಆರಂಭಿಸಲಿದ್ದಾರೆ.

ನಾಳೆ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಶೂಟಿಂಗ್ ಆರಂಭವಾಗಲಿದೆ. ಇದಕ್ಕಾಗಿ ಪೊಲೀಸರು ಬಿಗಿ ಭದ್ರತೆ ಒದಗಿಸಲಿದ್ದಾರೆ. ಚಿತ್ರೀಕರಣ ಸ್ಥಳಕ್ಕೆ ಅಭಿಮಾನಿಗಳ ಭೇಟಿಗೆ ಅವಕಾಶವಿಲ್ಲ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಶೂಟಿಂಗ್ ನಲ್ಲಿ ಭಾಗಿಯಾಗಲು ಮೈಸೂರಿಗೆ ಭೇಟಿ ನೀಡಲು ಒಪ್ಪಿಗೆ ಪಡೆದಿದ್ದರು. ಬೆನ್ನು ನೋವಿನ ಕಾರಣಕ್ಕೆ ಬಿಡುಗಡೆ ಬಳಿಕ ಕೆಲವು ದಿನ ಬ್ರೇಕ್ ಪಡೆದಿದ್ದ ದರ್ಶನ್ ಈಗ ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments