Webdunia - Bharat's app for daily news and videos

Install App

ಸಿನಿಮಾ ಸಕ್ಸಸ್ ಗಾಗಿ ತವರೂರಿನ ದೇವರ ಮೊರೆ ಹೋದ್ರಾ ಪೂಜಾ ಹೆಗ್ಡೆ?

Krishnaveni K
ಶನಿವಾರ, 6 ಜನವರಿ 2024 (12:38 IST)
ಮಂಗಳೂರು: ಮಂಗಳೂರು ಮೂಲದ ಟಾಲಿವುಡ್ ಬೆಡಗಿ ಪೂಜಾ ಹೆಗ್ಡೆ ಇತ್ತೀಚೆಗೆ ತವರೂರು ಉಡುಪಿಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಇತ್ತೀಚೆಗಷ್ಟೇ ಪೂಜಾ ಹೆಗ್ಡೆ ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದೇವಾಲಯದ ಅರ್ಚಕರು ಅವರ ವೃತ್ತಿ, ವೈಯಕ್ತಿಕ ಜೀವನದಲ್ಲಿ ಯಶಸ್ಸು ಸಿಗಲಿ ಎಂದು ಪ್ರಾರ್ಥನೆ ವೇಳೆ ಹರಸಿದ್ದಾರೆ. ಸಾಂಪ್ರದಾಯಿಕ ಸೀರೆಯಲ್ಲಿ ದೇವಾಲಯಕ್ಕೆ ಬಂದಿದ್ದ ಪೂಜಾ ಭಕ್ತಿಯಿಂದ ಪೂಜೆ ಸಲ್ಲಿಸಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಪೂಜಾಗೆ ಸಿನಿ ಕರಿಯರ್ ನಲ್ಲಿ ಹೇಳಿಕೊಳ್ಳುವ ಯಶಸ್ಸು ಸಿಗುತ್ತಿಲ್ಲ. ಕೊನೆಯದಾಗಿ ಸಲ್ಮಾನ್ ಖಾನ್ ಜೊತೆಗೆ ನಟಿಸಿದ್ದ ಬಾಲಿವುಡ್ ಸಿನಿಮಾವೂ ಮಕಾಡೆ ಮಲಗಿತ್ತು. ಟಾಲಿವುಡ್ ನಲ್ಲಿ ಹಲವು ಅವಕಾಶಗಳು ಕೈ ತಪ್ಪಿ ಹೋಗಿದ್ದವು.

ಇದೆಲ್ಲದರ ಬೆನ್ನಲ್ಲೇ ಪೂಜಾ ತಮ್ಮ ತವರಿಗೆ ಭೇಟಿ ನೀಡಿದ್ದು, ಟೆಂಪಲ್ ರನ್ ನಡೆಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಂಬಳ ಉತ್ಸವಕ್ಕೆ ಬಂದಿದ್ದ ಪೂಜಾ ಮುಂದೆ ಅವಕಾಶ ಸಿಕ್ಕರೆ ಕನ್ನಡದಲ್ಲಿ ನಟಿಸಲೂ ಸಿದ್ಧ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments