Webdunia - Bharat's app for daily news and videos

Install App

ದರ್ಶನ್ ಕೇಸ್ ಮುಚ್ಚಲು ರಾಜ್ಯದ ಪ್ರಭಾವಿ ಸಚಿವರಿಂದಲೇ ಕರೆ ಆರೋಪ

Krishnaveni K
ಗುರುವಾರ, 13 ಜೂನ್ 2024 (13:33 IST)
ಬೆಂಗಳೂರು: ರೇಣುಕಾಸ್ವಾಮಿ ಕೇಸ್ ಮುಚ್ಚಿಹಾಕಿ ದರ್ಶನ್ ರನ್ನು ಕೇಸ್ ನಿಂದ ಬಚಾವ್ ಮಾಡಲು ರಾಜ್ಯದ ಪ್ರಭಾವಿ ಸಚಿವರೇ ಒಬ್ಬರು ಪೊಲೀಸರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹತ್ಯೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿಯಾಗಿದ್ದಾರೆ. ಆದರೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ನೂರಾರು ಬಾರಿ ಕರೆ ಮಾಡಿರುವ ಪ್ರಭಾವಿ ಸಚಿವರೊಬ್ಬರು ಕೇಸ್ ನಿಂದ ದರ್ಶನ್ ರನ್ನು ತೆಗೆದುಹಾಕುವಂತೆ ಒತ್ತಡ ಹೇರಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ದರ್ಶನ್ ಗೆ ಯಾವೆಲ್ಲಾ ರಾಜಕಾರಣಿಗಳ ಜೊತೆ ಆತ್ಮೀಯ ಸಂಬಂಧವಿದೆ ಎಂದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಇವರೇ ಯಾರೋ ಕರೆ ಮಾಡಿರುವುದು ಖಚಿತವಾಗಿದೆ.

ಇನ್ನು, ತನಿಖಾಧಿಕಾರಿಗಳಿಗೆ ಮಾತ್ರವಲ್ಲ, ಮರಣೋತ್ತರ ಪರೀಕ್ಷೆ ವರದಿ ತಯಾರಿಸುವ ವೈದ್ಯರಿಗೂ 1 ಕೋಟಿ ರೂ. ಆಫರ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮರಣೋತ್ತರ ವರದಿಯಲ್ಲಿ ಹೃದಯಾಘಾತದಿಂದ ಸಾವು ಎಂದು ವರದಿ ನೀಡಿ ದರ್ಶನ್ ರನ್ನು ಬಚಾವ್ ಮಾಡಲು ರಾಜಕಾರಣಿಯಿಂದ ಒತ್ತಡ ಬಂದಿದೆಯಂತೆ.

ಆದರೆ ಸದ್ಯದ ಮಟ್ಟಿಗೆ ಯಾವ ಅಧಿಕಾರಿಗಳೂ ಈ ಎಲ್ಲಾ ಒತ್ತಡಗಳಿಗೆ ಮಣಿಯದೇ ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ದರ್ಶನ್ ಸಮಾಜದಲ್ಲಿ ಸೆಲೆಬ್ರಿಟಿ ಸ್ಥಾನ ಪಡೆದುಕೊಂಡಿದ್ದು, ಅವರು ಈ ಕೇಸ್ ನಲ್ಲಿ ಸಿಲುಕಿಕೊಂಡರೆ ಅವರ ಜೀವನವೇ ಹಾಳಾಗುತ್ತದೆ ಎಂಬ ಕಾರಣಕ್ಕೆ ಪ್ರಭಾವಿಗಳನ್ನು ಬಳಸಿ ಈ ಕೇಸ್ ನಿಂದ ಬಚಾವ್ ಮಾಡಲು ಪ್ರಯತ್ನ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments