Select Your Language

Notifications

webdunia
webdunia
webdunia
webdunia

ಶಿವರಾಜ್ ಕುಮಾರ್ ಬಗ್ಗೆ ನಾಲಿಗೆ ಹರಿಬಿಟ್ಟ ಪ್ರಶಾಂತ್ ಸಂಬರಗಿ

ಶಿವರಾಜ್ ಕುಮಾರ್ ಬಗ್ಗೆ ನಾಲಿಗೆ ಹರಿಬಿಟ್ಟ ಪ್ರಶಾಂತ್ ಸಂಬರಗಿ
ಬೆಂಗಳೂರು , ಶನಿವಾರ, 6 ಮೇ 2023 (11:11 IST)
ಬೆಂಗಳೂರು: ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿರುವ ನಟ ಶಿವರಾಜ್ ಕುಮಾರ್ ಬಗ್ಗೆ ಬಿಗ್ ಬಾಸ್ ಖ್ಯಾತಿ ಪ್ರಶಾಂತ್ ಸಂಬರಗಿ ನಾಲಿಗೆ ಹರಿಬಿಟ್ಟಿದ್ದಾರೆ.

ಶಿವಣ್ಣ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಪ್ರಶಾಂತ್ ಸಂಬರಗಿ, ಪೇಮೆಂಟ್ ಗಾಗಿ ಕೆಲಸ ಮಾಡ್ತಾರೆ ಎನ್ನುವ ರೀತಿ ಬರೆದುಕೊಂಡಿದ್ದಾರೆ. ಇದು ಶಿವಣ್ಣನ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

‘ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದಿಲ್ಲ. ಆದರೆ ಪೇಮೆಂಟ್ ತುಂಬಾನೇ ಮುಖ್ಯ. ಒಪ್ಪಿಕೊಂಡಿದ್ದ ಸಿನಿಮಾ ಮಾಡ್ತಾರೆ. ತುಂಬಾ ಎಮೋಷನಲ್ ಜೀವಿ ನಮ್ಮ ಶಿವಣ್ಣ. ಸಿನಿಮಾ ಫ್ಲಾಪ್ ಆದರೂ ಅವರು ಕೇರ್ ಮಾಡಲ್ಲ. ಮತ್ತೆ ಪೇಮೆಂಟ್ ತಗೊಂಡು ಇನ್ನೊಂದು ಫಿಲಂ ಸೈನ್ ಮಾಡ್ತಾರೆ. ಅದೇ ಫಾರ್ಮುಲಾ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಕಾಂಡಿಡೇಟ್ ಗೆದ್ರೆ ಏನು ಸೋತ್ರೆ ಏನು ಎಲ್ಲಾ ಒಂದೇ. ಏನೋ ಹೇಳ್ತಾರಲ್ಲ ಗೆದ್ದರೆ ಬೆಟ್ಟ, ಇಲ್ಲಾ ಅಂದ್ರೆ.. ಬಂತಾ ಪ್ಯಾಕೆಟ್.. ಸರಿ ಆಲ್ ರೈಟ್ ಮುಂದೆ ಹೋಗೋಣ’ ಎಂದು ಬರೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸುದೀಪ್ ಗೆ ಬೆದರಿಕೆ ಪತ್ರ ಪ್ರಕರಣದ. ಡೈರೆಕ್ಟರ್ ರಮೇಶ್ ಕಿಟ್ಟಿ ಅರೆಸ್ಟ್