Webdunia - Bharat's app for daily news and videos

Install App

ದರ್ಶನ್ ರನ್ನು ದೆವ್ವ ಎಂದು ಪರೋಕ್ಷವಾಗಿ ಕರೆದು ತಿವಿದ ಉಮಾಪತಿ ಗೌಡ

Krishnaveni K
ಸೋಮವಾರ, 1 ಜುಲೈ 2024 (11:35 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ರನ್ನು ನಿರ್ಮಾಪಕ ಉಮಾಪತಿ ಗೌಡ ಪರೋಕ್ಷವಾಗಿ ದೆವ್ವಕ್ಕೆ ಹೋಲಿಸಿದ್ದಾರೆ.

ದರ್ಶನ್ ಬಂಧನವಾದ ಬಳಿಕ ಉಮಾಪತಿ ಗೌಡ ತಮ್ಮಿಬ್ಬರ ನಡುವಿನ ಮನಸ್ತಾಪವನ್ನೇ ಹೊರಹಾಕುತ್ತಿದ್ದಾರೆ. ಈ ಹಿಂದೆ ದರ್ಶನ್ ತಮ್ಮನ್ನು ತಗಡು ಎಂದು ಕರೆದಿದ್ದಕ್ಕೆ ಉಮಾಪತಿ ಸರಿಯಾಗಿಯೇ ತಿರುಗೇಟು ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಉಮಾಪತಿ ವಿರುದ್ಧ ದರ್ಶನ್ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಕೆಂಡ ಕಾರುತ್ತಿದ್ದಾರೆ.

ದರ್ಶನ್ ವಿರುದ್ಧ ಹೇಳಿಕೆ ಕೊಟ್ಟಾಗಿನಿಂದ ಉಮಾಪತಿ ಗೌಡ ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ಫ್ಯಾನ್ಸ್ ಟಾರ್ಗೆಟ್ ಆಗಿದ್ದಾರೆ. ಜೊತೆಗೆ ದರ್ಶನ್ ಗೆ ಈಗಾಗಲೇ ಸಿನಿಮಾ ರಂಗದ ಅನೇಕ ತಾರೆಯರು ಬೆಂಬಲ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಉಮಾಪತಿ ಗೌಡ ಇನ್ನೊಂದು ಹೇಳಿಕೆ ನೀಡಿದ್ದು, ದರ್ಶನ್ ರನ್ನು ದೆವ್ವಕ್ಕೆ ಹೋಲಿಸಿ ಮಾತನಾಡಿದ್ದಾರೆ. ಇದು ದರ್ಶನ್ ಫ್ಯಾನ್ಸ್ ಮತ್ತಷ್ಟು ಕೆರಳುವಂತೆ ಮಾಡಲಿದೆ.

ಕೋಲಾರದಲ್ಲಿ ಮಾತನಾಡಿದ ಅವರು ಹಿಂದೆಯೂ ನಾನು ಹೇಳಿದ್ದೆ. ನಿನ್ನ ಸ್ನೇಹಿತರನ್ನು ತೋರಿಸು, ನೀನೇನು ಹೇಳುವೆ ಎಂದು. ನಾವು ದೇವರನ್ನು ಪೂಜೆ ಮಾಡುತ್ತೇವೆ. ಆದರೆ ದೆವ್ವಗಳನ್ನು ಪೂಜೆ ಮಾಡುವ ಒಂದು ವರ್ಗ ಇರುತ್ತೆ, ಅದು ಅವರವರ ಆಯ್ಕೆ ಎಂದು ಹೇಳಿದ್ದಾರೆ. ಈ ಹೇಳಿಕೆ ದರ್ಶನ್ ರನ್ನು ಉದ್ದೇಶಿಸಿಯೇ ಹೇಳಿದ್ದು ಎಂದು ವಿಶ್ಲೇಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments