Publish Date: Tue, 16 Nov 2021 (08:55 IST)
Updated Date: Tue, 16 Nov 2021 (09:04 IST)
ಬೆಂಗಳೂರು: ಇತ್ತೀಚೆಗೆ ನಮ್ಮನ್ನಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೌರವಾರ್ಥ ಇಂದು ಸಂಜೆ ಕರ್ನಾಟಕ ವಾಣಿಜ್ಯ ಮಂಡಳಿ ಅರಮನೆ ಮೈದಾನದಲ್ಲಿ ಪುನೀತ್ ನಮನ ಕಾರ್ಯಕ್ರಮ ಆಯೋಜಿಸಿದೆ.
ಪುನೀತ್ ಗೆ ಗೌರವ ನಮನ ಸಲ್ಲಿಸಲು ಇಂದು ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಡಾ. ರಾಜ್ ಕುಟುಂಬಸ್ಥರು, ಸ್ಯಾಂಡಲ್ ವುಡ್ ಮತ್ತು ದಕ್ಷಿಣ ಭಾರತದ ಸಿನಿ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪುನೀತ್ ಕುರಿತು ಮಾತು, ಅವರ ಕುರಿತಾಗಿ ಸಾಹಿತಿ ನಾಗೇಂದ್ರ ಪ್ರಸಾದ್ ಬರೆದ ಹಾಡನ್ನು ಗುರುಕಿರಣ್ ಸಂಗೀತ ಸಂಯೋಜನೆಯಲ್ಲಿ ಹಾಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ. ಆದರೆ ಟಿವಿ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ.