Webdunia - Bharat's app for daily news and videos

Install App

ಪುಟ್ಟಕ್ಕನ ಮಕ್ಕಳು ಟೀಂ ಕಿತ್ತು ಹಾಕಿಲ್ಲ: ಸೀರಿಯಲ್ ಬಿಡಲು ಕಾರಣ ತಿಳಿಸಿದ ಸಂಜನಾ ಬುರ್ಲಿ

Sampriya
ಭಾನುವಾರ, 27 ಅಕ್ಟೋಬರ್ 2024 (16:33 IST)
Photo Courtesy X
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಟಾಪ್ ಸೀರಿಯಲ್‌ಗಳಲ್ಲಿ ಒಂದಾಗಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿಯ ನಾಯಕಿ ಸ್ನೇಹಾ ಸೀರಿಯಲ್‌ನಲ್ಲಿ ಹೊರಬಂದಿರುವುದಾಗಿ ಹೇಳಿಕೊಂಡಿದ್ದಾರೆ. ಇದೀಗ ಧಾರಾವಾಹಿಯಿಂದ ಹೊರ ಬಂದ ಬಗ್ಗೆ ಸಂಜನಾ ಅವರು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಸಂಜನಾ ಅವರನ್ನು ಪುಟ್ಟಕ್ಕನ ಸೀರಿಯಲ್‌ನಿಂದ ಕಿತ್ತು ಬಿಸಾಕಲಾಗಿದೆ ಎಂದು ಸುದ್ದಿ ಹಬ್ಬಿತ್ತು. ಇದೀಗ ಇದಕ್ಕೆಲ್ಲ ಅವರು ಉತ್ತರ ನೀಡಿದ್ದಾರೆ.

ಪೋಸ್ಟ್‌ನಲ್ಲಿ ಹೀಗಿದೆ:  ನಮಸ್ತೆ ಪ್ರಿಯರೇ ಎಲ್ಲಾ ನನ್ನ ಅಭಿಮಾನಿಗಳು ಮತ್ತು ಫಾಲೋವರ್ಸ್‌ಗಳ ಜತೆ ಒಂದು ಸುದ್ದಿಯನ್ನು ಹಂಚಿಕೊಳ್ಳಲು ಬಯಸುತ್ತೇನೆ. ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಸ್ನೇಹಾ ಪಾತ್ರದ ಜತೆ ನನ್ನ ಪ್ರಯಾಣ ಕೂಡ ಎಂಡ್‌ ಆಗಿದೆ ಎಂದು ಹೇಳಿಕೊಂಡಿದ್ದಾರೆ.

ಮುಂದುವರಿದು, ಕಳೆದ 3 ವರ್ಷಗಳಿಂದ ಸ್ನೇಹಾ ಪಾತ್ರವನ್ನು ನಿರ್ವಹಿಸುವುದು ಕಳೆದ ಮೂರು ವರ್ಷಗಳಿಂದಲೂ ನನ್ನ ವೃತ್ತಿ ಜೀವನದ ಭಾಗವಾಗಿತ್ತು. ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ. ನನಗೆ ಈ ಉತ್ತಮ ಪಾತ್ರವನ್ನು ನೀಡಿದ್ದಕ್ಕಾಗಿ ಮತ್ತು ನನ್ನನ್ನು ಸ್ನೇಹಾ ಆಗಿ ಆಯ್ಕೆ ಮಾಡಿದ್ದಕ್ಕಾಗಿ ಜೀ ವಾಹಿನಿ ಮತ್ತು ಪ್ರೊಡಕ್ಷನ್ ಹೌಸ್‌ಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು.

ಕೆಲವು ವೈಯಕ್ತಿಕ ಕಾರಣಿಗಳಿಗಾಗಿ ಹಾಗೂ ಬಂದು ನಿಂತಿರುವ ಕೆಲವು ಸವಾಲುಗಳನ್ನು ಎದುರಿಸಲು ನಾನು ಈ ಧಾರಾವಾಹಿಂದ ಹೊರಗೆ ಬರಲೇ ಬೇಕಾಯಿತು. ಈ ಪ್ರಾಜೆಕ್ಟ್‌ನಿಂದ ನಾನು ಪಡೆದ ಅಪಾರ ಪ್ರೀತಿ ಮತ್ತು ಮನ್ನಣೆಯು ನನಗೆ ಸಿಕ್ಕ ದೊಡ್ಡ ಪ್ರಶಸ್ತಿ. ಅದು ನನ್ನೊಂದಿಗೆ ಶಾಶ್ವತವಾಗಿ ಉಳಿಯುತ್ತದೆ. ಹೆಚ್ಚಿನವರು ಪಾತ್ರವು ಸಾಯುವ ದೃಶ್ಯ ನೋಡಿ ದುಃಖಿತರಾಗಿದ್ದೀರಿ ಎಂದು ನನಗೆ ತಿಳಿದಿದೆ. ಆದರೆ ಇದನ್ನು ಧನಾತ್ಮಕವಾಗಿ ತೆಗೆದುಕೊಳ್ಳೋಣ. ಮುಂದಿನ ದಿನಗಳಲ್ಲಿ ಅಭಿಮಾನಿಗಳನ್ನು ಭಿನ್ನ ಪಾತ್ರದ ಮೂಲಕ ಭೇಟಿ ಆಗುವ ವಿಶ್ವಾಸ ನನಗೆ ಇದೆ.

ಸ್ವಲ್ಪ ದಿನಗಳ ನಂತರ ಮತ್ತೇ ವಿಭಿನ್ನ ಪಾತ್ರದ ಮೂಲಕ ನಿಮ್ಮ ಮುಂದೆ ಬರುತ್ತೇನೆ. ಕಳೆದ 3 ವರ್ಷಗಳಲ್ಲಿ ಕರ್ನಾಟಕ ನನಗೆ ನೀಡಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನನಗೆ ಮುಂದಿನ ದಿನಗಳಲ್ಲೂ ಇದೇ ಪ್ರೀತಿ, ಗೌರವ ಸಿಗುವ ವಿಶ್ವಾಸವಿದೆ ಎಂದು ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments