Webdunia - Bharat's app for daily news and videos

Install App

ಎರಡು ತಿಂಗಳ ಬಳಿಕ ದರ್ಶನ್ ನೋಡಲು ಜೈಲಿಗೆ ಬಂದ ರಚಿತಾ ರಾಮ್

Krishnaveni K
ಗುರುವಾರ, 22 ಆಗಸ್ಟ್ 2024 (15:04 IST)
Photo Credit: Facebook
ಬೆಂಗಳೂರು: ತಮ್ಮನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಈಗ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಇದೀಗ ದರ್ಶನ್ ಬಂಧನವಾಗಿ ಎರಡು ತಿಂಗಳ ಬಳಿಕ ನಟಿ ರಚಿತಾ ರಾಮ್ ಜೈಲಿಗೆ ಬಂದಿದ್ದಾರೆ.

ರಚಿತಾ ರಾಮ್ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಬಂದು ದರ್ಶನ್ ರನ್ನು ಭೇಟಿ ಮಾಡಿದ್ದಾರೆ. ರಚಿತಾ ಜೊತೆಗೆ ಬಿಜೆಪಿ ಮುಖಂಡ ಇಂಡವಾಳು ಸಚ್ಚಿದಾನಂದ್ ಕೂಡಾ ಇದ್ದರು. ಇಬ್ಬರೂ ಇಂದು ಪರಪ್ಪನ ಅಗ್ರಹಾರ ಜೈಲಿನ ಹೊರಾವರಣದಲ್ಲಿ ಕಾಣಿಸಿಕೊಂಡಿದ್ದಾರೆ.

ದರ್ಶನ್ ಜೈಲು ಸೇರಿದ ಬಳಿಕ ಇದುವರೆಗೆ ಅವರ ಅನೇಕ ಆಪ್ತರು ಬಂದು ಭೇಟಿ ಮಾಡಿಕೊಂಡು ಹೋಗಿದ್ದಾರೆ. ವಾರದಲ್ಲಿ ಇಬ್ಬರಿಗೆ ಮಾತ್ರ ದರ್ಶನ್ ಭೇಟಿಗೆ ಅವಕಾಶವಿದೆ. ಮೊನ್ನೆಯಷ್ಟೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ರನ್ನು ಭೇಟಿ ಮಾಡಿಕೊಂಡು ಹೋಗಿದ್ದರು.

ಕಳೆದ ವಾರ ಒಂದು ದಿನ ವಿಜಯಲಕ್ಷ್ಮಿ ಬಂದಿದ್ದರೆ ಮತ್ತೊಂದು ದಿನ ಅಭಿಷೇಕ್ ಅಂಬರೀಶ್, ಚಿಕ್ಕಣ್ಣ ಮುಂತಾದವರು ಬಂದು ದರ್ಶನ್ ಭೇಟಿ ಮಾಡಿಕೊಂಡು ಹೋಗಿದ್ದರು. ಇಂದು ರಚಿತಾ ರಾಮ್ ಜೈಲಿಗೆ ಬಂದಿದ್ದಾರೆ. ದರ್ಶನ್ ಕುಟುಂಬದವರಿಗೆ ಭೇಟಿಗೆ ಅವಕಾಶ ನೋಡಿಕೊಂಡು ಇತರರಿಗೆ ಅವಕಾಶ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಮುಂದಿನ ಸುದ್ದಿ
Show comments