Publish Date: Fri, 08 Jan 2021 (11:07 IST)
Updated Date: Fri, 08 Jan 2021 (11:10 IST)
ಬೆಂಗಳೂರು: ವಂಚಕ ಯುವರಾಜ್ ಜೊತೆಗಿನ ಹಣಕಾಸಿನ ವ್ಯವಹಾರದ ಕುರಿತಂತೆ ನಟಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.
ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಆಗಮಿಸಿರುವ ರಾಧಿಕಾರನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಇದಕ್ಕೂ ಮೊದಲು ಅವರ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಯುವರಾಜ್ ಜೊತೆಗಿನ ಹಣಕಾಸಿನ ವ್ಯವಹಾರ, ಅವರ ಜೊತೆಗಿನ ಒಡನಾಟದ ಬಗ್ಗೆ ನಾಗರಾಜ್ ನೇತೃತ್ವದ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.