Webdunia - Bharat's app for daily news and videos

Install App

ರಕ್ಷಿತ್, ರಿಷಬ್, ರಾಜ್ ಬಿ ಶೆಟ್ಟಿ ಉತ್ತರ ಕರ್ನಾಟಕದ ಕತೆಗಳನ್ನು ಸಿನಿಮಾ ಮಾಡಲ್ಲ ಯಾಕೆ?

Webdunia
ಶನಿವಾರ, 5 ಆಗಸ್ಟ್ 2023 (08:50 IST)
ಬೆಂಗಳೂರು: ರಾಜ್ ಬಿ ಶೆಟ್ಟಿಯವರ ಟೋಬಿ ಸಿನಿಮಾ ಟ್ರೈಲರ್ ಲಾಂಚ್  ವೇಳೆ ಮಾತನಾಡಿರುವ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಾವ್ಯಾಕೆ ಉತ್ತರ ಕರ್ನಾಟಕದ ಕತೆಗಳನ್ನು ತೆರೆ ಮೇಲೆ ತರೋದಿಲ್ಲ ಎಂದು ಹೇಳಿದ್ದಾರೆ.

ಕನ್ನಡ ಸಿನಿಮಾ ರಂಗದಲ್ಲಿ ಇಂದು ರಾಜ್, ರಿಷಬ್, ರಕ್ಷಿತ್ ಎಂಬ ತ್ರಿಬಲ್ ಆರ್ ನದ್ದೇ ಹವಾ. ಇವರ ಸಿನಿಮಾಗಳು ಕರಾವಳಿ ಭಾಗಕ್ಕೆ ಸಂಬಂಧಿಸಿದ ಕತೆ, ಅಲ್ಲಿನ ಭಾಷೆಯನ್ನೇ ಹೊಂದಿರುತ್ತದೆ. ಉತ್ತರ ಕರ್ನಾಟಕದ ಭಾಗದ ಸಂಸ್ಕೃತಿಯನ್ನು ಬಿಂಬಿಸುವ ಸಿನಿಮಾಗಳನ್ನು ಇವರು ಮಾಡಲ್ಲ ಎನ್ನುವ ಅಪವಾದವಿದೆ.

ಈ ಬಗ್ಗೆ ರಕ್ಷಿತ್ ನಿನ್ನೆ ಸ್ಪಷ್ಟನೆ ಕೊಟ್ಟಿದ್ದಾರೆ. ‘ಉತ್ತರ ಕರ್ನಾಟಕದ ಮಂದಿ ಸಿನಿಮಾಗೆ ಬರಬೇಕು. ನಮ್ಮಲ್ಲಿ ನಟರು, ನಿರ್ದೇಶಕರು ಹೆಚ್ಚಾಗಬೇಕು. ಯಾಕೆಂದರೆ ಇಂಡಸ್ಟ್ರಿ ಬೆಳೆದರೆ ಮಾತ್ರ ನಾವು ಬೆಳೆಯಲು ಸಾಧ್ಯ. ನಮಗೆ ಈ ಇಂಡಸ್ಟ್ರಿಯೇ ಪ್ಲ್ಯಾಟ್ ಫಾರಂ. ನಾವು ಉತ್ತರ ಕರ್ನಾಟಕದ ಶೈಲಿಯ ಸಿನಿಮಾಗಳನ್ನು ಮಾಡಕ್ಕಾಗಲ್ಲ. ಯಾಕೆಂದರೆ ಅಲ್ಲಿನ ಶೈಲಿಯ ಸಿನಿಮಾಗಳನ್ನು ಮಾಡಬೇಕೆಂದರೆ ಅಲ್ಲಿ ಕೆಲವು ಸಮಯ ಜೀವನ ಮಾಡಬೇಕು. ಅಲ್ಲಿಯ ಸಂಸ್ಕೃತಿ, ಜೀವನ ಶೈಲಿಯನ್ನು ತಿಳಿದುಕೊಳ್ಳಬೇಕು. ಇಲ್ಲದೇ ಹೋದರೆ ಅದು ಸಾಧ್ಯವಿಲ್ಲ. ಅದಕ್ಕೆ ಉತ್ತರ ಕರ್ನಾಟಕದ ಪ್ರತಿಭೆಗಳು ಸಿನಿಮಾ ರಂಗಕ್ಕೆ ಬರಲಿ. ಆಗ ಅಂತಹ ಸಿನಿಮಾಗಳು ಬರಬಹುದು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments