Webdunia - Bharat's app for daily news and videos

Install App

ನಾನು ಹೈದರಾಬಾದ್ ನವಳು ಎಂದ ರಶ್ಮಿಕಾ ಮಂದಣ್ಣ: ಕರ್ನಾಟಕವನ್ನು ಮರೆತೇ ಬಿಟ್ಟ ಸುಂದರಿ

Krishnaveni K
ಶುಕ್ರವಾರ, 14 ಫೆಬ್ರವರಿ 2025 (10:03 IST)
ಹೈದರಾಬಾದ್: ಪರಭಾಷೆಗಳಲ್ಲಿ ಮಿಂಚಿದ ಮೇಲೆ ಕನ್ನಡವನ್ನು ಮರೆತೇ ಬಿಟ್ಟಿದ್ದಾರೆಂಬ ಟೀಕೆಗೊಳಗಾಗಿರುವ ನಟಿ ರಶ್ಮಿಕಾ ಮಂದಣ್ಣ ಈಗ ನಾನು ಹೈದರಾಬಾದ್ ನವಳು ಎಂದು ಕನ್ನಡಿಗರ ಟೀಕೆಗೆ ಗುರಿಯಾಗಿದ್ದಾರೆ.

ಕಿರಿಕ್ ಪಾರ್ಟಿ ಕನ್ನಡ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದ ರಶ್ಮಿಕಾ ಬಳಿಕ ರಕ್ಷಿತ್ ಶೆಟ್ಟಿ ಜೊತೆ ಎಂಗೇಜ್ ಮೆಂಟ್ ಮಾಡಿಕೊಂಡು ಬ್ರೇಕ್ ಅಪ್ ಕೂಡಾ ಮಾಡಿಕೊಂಡಿದ್ದರು. ಅದಾದ ಬಳಿಕ ಅವರು ಕನ್ನಡಕ್ಕೆ ಗುಡ್ ಬೈ ಹೇಳಿ ತೆಲುಗಿನಲ್ಲೇ ಹಿಟ್ ಸಿನಿಮಾ ಕೊಡುತ್ತಾ ಅಲ್ಲೇ ಸೆಟಲ್ ಆಗಿದ್ದಾರೆ.

ಹಿಂದೊಮ್ಮೆ ಕನ್ನಡ ಕಷ್ಟದ ಭಾಷೆ ಎಂದಿದ್ದ ರಶ್ಮಿಕಾ ಇದೀಗ ನಾನು ಹೈದರಾಬಾದ್ ನವಳು ಎಂದು ಮತ್ತೊಮ್ಮೆ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಬಾಲಿವುಡ್ ನ ಛಾವಾ ಸಿನಿಮಾದ ಈವೆಂಟ್ ನಲ್ಲಿ ಮಾತನಾಡಿರುವ ರಶ್ಮಿಕಾ ‘ನಾನು ಹೈದರಾಬಾದ್ ನವಳು. ಅಲ್ಲಿಂದ ಒಬ್ಬಳೇ ಬಂದಿದ್ದೆ.ಬಹುಶಃ ಈಗ ನಾನು ನಿಮ್ಮ ಕುಟುಂಬದ ಭಾಗವಾಗಿದ್ದೇನೆ’ ಎಂದಿದ್ದಾರೆ.

ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳೆದ ಮೇಲೆ ಹುಟ್ಟಿದ ಊರನ್ನೇ ಮರೆಯುವುದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿಲ್ಲ. ನಿಮ್ಮನ್ನು ಧ್ವೇಷಿಸಲು ನೀವೇ ಹೊಸ ಹೊಸ ಕಾರಣಗಳನ್ನು ಕೊಡುತ್ತಿದ್ದೀರಿ ಎಂದು ರಶ್ಮಿಕಾಗೆ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments