Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ ನಿರೂಪಣೆಗೆ ಕಿಚ್ಚ ಸುದೀಪ್ ಗುಡ್ ಬೈ ಹೇಳಿರುವುದರ ಹಿಂದಿರುವ ಅಸಲಿ ಕಾರಣ ಇಲ್ಲಿದೆ

Krishnaveni K
ಸೋಮವಾರ, 14 ಅಕ್ಟೋಬರ್ 2024 (10:25 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11 ನನ್ನ ಕೊನೆಯ ಬಿಗ್ ಬಾಸ್. ಮುಂದಿನ ಸೀಸನ್ ನಿಂದ ನಾನು ನಿರೂಪಣೆ ಮಾಡುವುದಿಲ್ಲ ಎಂದು ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಶಾಕಿಂಗ್ ಘೋಷಣೆ ಮಾಡಿದ್ದಾರೆ.

ಕಿಚ್ಚ ಈ ಸೀಸನ್ ನಲ್ಲಿಯೇ ನಿರೂಪಣೆ ಮಾಡಲ್ಲ ಎಂಬ ಸುದ್ದಿಗಳಿತ್ತು. ಕೊನೆಗೆ ಈ ಸೀಸನ್ ಮಾಡಲು ಒಪ್ಪಿಕೊಂಡರು. ಆದರೆ ಈಗ ನಿನ್ನೆಯ ಸೂಪರ್ ಸಂಡೇ ಎಪಿಸೋಡ್ ಗೆ ಮೊದಲು ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟಿದ್ದಾರೆ. ಇದು ನನ್ನ ಕೊನೆಯ ಬಿಗ್ ಬಾಸ್ ಎಂದಿದ್ದಾರೆ.

ನಿಮ್ಮ ಅಭೂತಪೂರ್ವ ಪ್ರತಿಕ್ರಿಯೆಗೆ ಧನ್ಯವಾದಗಳು. ಇದು 10 ಪ್ಲಸ್ 1 ವರ್ಷಕ್ಕೆ ಕಾಲಿಟ್ಟಿದ್ದೇನೆ. ಇದೀಗ ವಿದಾಯ ಹೇಳಲು ಸಮಯ ಬಂದಿದೆ. ಮುಂದೆ ನಾನು ಏನು ಮಾಡಬೇಕೆಂದಿದ್ದೇನೆ ಆ ಮಾರ್ಗದಲ್ಲಿ ನಡೆಯಬೇಕಿದೆ. ಬಿಗ್ ಬಾಸ್ ನಿರೂಪಕನಾಗಿ ಇದು ನನ್ನ ಕೊನೆಯ ಸೀಸನ್.  ನನ್ನ ನಿರ್ಧಾರವನ್ನು ಕಲರ್ಸ್ ವಾಹಿನಿ ಮತ್ತು ವೀಕ್ಷಕರು ಗೌರವಿಸುತ್ತಾರೆ ಎಂದುಕೊಂಡಿದ್ದೇನೆ. ಈ ಸೀಸನ್ ನ್ನು ಅತ್ಯಂತ ಬೆಸ್ಟ್ ಆಗಿ ಮಾಡೋಣ ಎಂದಿದ್ದಾರೆ. ಸುದೀಪ್ ಅಧಿಕೃತವಾಗಿ ಇಂತಹದ್ದೊಂದು ಪ್ರಕಟಣೆ ನೀಡುತ್ತಿದ್ದಂತೇ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಕಿಚ್ಚನಿಲ್ಲದೇ ಬಿಗ್ ಬಾಸ್ ಇಲ್ಲ. ಅವರಿಲ್ಲದ ಶೋ ನಾವು ನೋಡಲ್ಲ ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.

ಅಸಲಿಗೆ ಸುದೀಪ್ ಬಿಗ್ ಬಾಸ್ ಶೋ ಬಿಡುತ್ತಿರುವುದಕ್ಕೆ ಕಾರಣವೂ ಇದೆ. ಸುದೀಪ್ ಗೆ ಬಿಗ್ ಬಾಸ್ ನಿರೂಪಣೆ ಹೊರೆಯಾಗುತ್ತಿದೆ ಎಂದು ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲೇ ಹೇಳಿದ್ದರು. ಸುದೀಪ್ ಮುಂದಿನ ದಿನಗಳಲ್ಲಿ ವರ್ಷಕ್ಕೆ  ಮಾಡುವ ಸಿನಿಮಾಗಳ ಸಂಖ್ಯೆ ಹೆಚ್ಚಿಸಬೇಕು ಎಂಬ ಇರಾದೆ ಹೊಂದಿದ್ದಾರೆ. ಆದರೆ ಇದಕ್ಕೆ ಬಿಗ್ ಬಾಸ್ ಅಡ್ಡಿಯಾಗುತ್ತಿದೆ. ಬಿಗ್ ಬಾಸ್ ಶೋ ಇದ್ದಾಗ ಅವರು ಸಿನಿಮಾಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ವಾರಕ್ಕೆ ನಾಲ್ಕು ದಿನ ಮಾತ್ರ ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಬಹುದು. ವೀಕೆಂಡ್ ನಲ್ಲಿ ಎಲ್ಲೇ ಇದ್ದರೂ ಮತ್ತೆ ಬಿಬಿಕೆಗೆ ಮರಳಬೇಕಾಗುತ್ತದೆ ಎಂದು ಸ್ವತಃ ಸುದೀಪ್ ಇತ್ತೀಚೆಗೆ ತಮ್ಮ ಸಮಸ್ಯೆ ಹೇಳಿಕೊಂಡಿದ್ದರು. ಇದರ ಜೊತೆಗೆ ಅವರ ಮೆಚ್ಚಿನ ಸಿಸಿಎಲ್ ಕ್ರಿಕೆಟ್ ಟೂರ್ನಿಗಳಲ್ಲೂ ಭಾಗಿಯಾಗುತ್ತಾರೆ. ಇದೆಲ್ಲದರ ನಡುವೆ ಅವರಿಗೆ ಸಿನಿಮಾ ಮಾಡಲು ಪುರುಸೊತ್ತು ಸಿಗುತ್ತಿಲ್ಲ. ಇದೇ ಕಾರಣಕ್ಕೆ ಅವರು ಬಿಗ್ ಬಾಸ್ ಬಿಡುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments